ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ.
ಯೆಸ್, ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ ಸುಮಾರು 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದಾರೆ.
ಅಧಿಕಾರಿಗಳ ಮಾಹಿತಿಯಂತೆ, ಬ್ಯಾಂಕಾಕ್ ಸೇರಿದಂತೆ ವಿದೇಶದ ಹಲವು ನಗರಗಳಿಂದ ಬಂದ ಪ್ರಯಾಣಿಕರು ತಮ್ಮ ಬ್ಯಾಗ್ಗಳಲ್ಲಿ 38.64 ಕೆ.ಜಿ ಹೈಡ್ರೋಪೋನಿಕ್ಸ್ ಗಾಂಜಾ, 2.38 ಲಕ್ಷ ರೂ. ಮೌಲ್ಯದ ವಿದೇಶಿ ಇ-ಸಿಗರೇಟ್ಗಳು ಹಾಗೂ ಎಂಟು ಬಗೆಯ ಅಪರೂಪದ ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದರೆಂದು ಗೊತ್ತಾಗಿದೆ. ಏರ್ಪೋರ್ಟ್ ನ ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯಾಸ್ಪದ ಬ್ಯಾಗ್ಗಳನ್ನು ಸ್ಕ್ಯಾನಿಂಗ್ ಮಾಡಿದಾಗ ಈ ಅಕ್ರಮ ವಸ್ತುಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕಸ್ಟಮ್ಸ್ ಅಧಿಕಾರಿಗಳು ಕಸ್ಟಮ್ಸ್ ಆಕ್ಟ್ ಮತ್ತು ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…