ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ.
ಯೆಸ್, ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ ಸುಮಾರು 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದಾರೆ.
ಅಧಿಕಾರಿಗಳ ಮಾಹಿತಿಯಂತೆ, ಬ್ಯಾಂಕಾಕ್ ಸೇರಿದಂತೆ ವಿದೇಶದ ಹಲವು ನಗರಗಳಿಂದ ಬಂದ ಪ್ರಯಾಣಿಕರು ತಮ್ಮ ಬ್ಯಾಗ್ಗಳಲ್ಲಿ 38.64 ಕೆ.ಜಿ ಹೈಡ್ರೋಪೋನಿಕ್ಸ್ ಗಾಂಜಾ, 2.38 ಲಕ್ಷ ರೂ. ಮೌಲ್ಯದ ವಿದೇಶಿ ಇ-ಸಿಗರೇಟ್ಗಳು ಹಾಗೂ ಎಂಟು ಬಗೆಯ ಅಪರೂಪದ ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದರೆಂದು ಗೊತ್ತಾಗಿದೆ. ಏರ್ಪೋರ್ಟ್ ನ ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯಾಸ್ಪದ ಬ್ಯಾಗ್ಗಳನ್ನು ಸ್ಕ್ಯಾನಿಂಗ್ ಮಾಡಿದಾಗ ಈ ಅಕ್ರಮ ವಸ್ತುಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕಸ್ಟಮ್ಸ್ ಅಧಿಕಾರಿಗಳು ಕಸ್ಟಮ್ಸ್ ಆಕ್ಟ್ ಮತ್ತು ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…