ಕಸ್ಟಮ್ಸ್ ಡಿಆರ್ ಐ ತಂಡದ ಭರ್ಜರಿ ಕಾರ್ಯಾಚರಣೆ‌: ಕೋಟಿ ಕೋಟಿ ಮೌಲ್ಯದ ಕೊಕೇನ್ ವಶ

ಕಸ್ಟಮ್ಸ್ ಡಿಆರ್ ಐ ತಂಡದಿಂದ ಭರ್ಜರಿ ಕಾರ್ಯಾಚರಣೆ‌ ನಡೆದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ತಂದಿದ್ದ ಕೋಟಿ ಕೋಟಿ ಮೌಲ್ಯದ ಕೊಕೇನ್ ವಶಕ್ಕೆ ಪಡೆಯಲಾಗಿದೆ.

ವಿದೇಶದಿಂದ ತಂದಿದ್ದ ಬರೋಬ್ಬರಿ 30 ಕೋಟಿ ಮೌಲ್ಯದ ಮೂರು ಕೆಜಿ ಕೊಕೇನ್ ವಶಕ್ಕೆ ಪಡೆಯಲಾಗಿದೆ. ಸ್ಮಗ್ಲರ್ ಒಬ್ಬ ದೋಹಾದಿಂದ ಬೆಂಗಳೂರಿಗೆ ಇಂಡಿಗೋ 6E1302 ವಿಮಾನದಲ್ಲಿ ಲಗೇಜ್ ಬ್ಯಾಗ್ ನಲ್ಲಿ 3 ಕೆಜಿ ಕೊಕೇನ್ ಅಡಗಿಸಿಟ್ಟುಕೊಂಡು ತಂದಿದ್ದ.

ಏರ್ಪೋಟ್ ನಲ್ಲಿ ಲಗೇಜ್ ಬ್ಯಾಗ್ ಚೆಕಿಂಗ್ ವೇಳೆ ಕೊಕೇನ್ ಪತ್ತೆಯಾಗಿದೆ. ಕೂಡಲೇ ಕೊಕೇನ್ ಸಮೇತ ಆರೋಪಿಯನ್ನ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ

ಶಾರ್ಜಾ, ದುಬೈ, ಶ್ರೀಲಂಕಾ, ಬಹ್ರೇನ್ ಮತ್ತು ಕೊಲಂಬೊದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ವಿದೇಶಿ ಹಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಒಟ್ಟು 11 ಪ್ರಕರಣಗಳಲ್ಲಿ ವಿವಿಧ ದೇಶಗಳಿಂದ ಬಂದ 8  ಪ್ರಯಾಣಿಕರನ್ನು ಬಂಧಿಸಿ 6.6 ಕೋಟಿ ಮೌಲ್ಯದ 9 ಕೆಜಿ 375 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಅದೇರೀತಿ 1.59 ಕೋಟಿ ಮೌಲ್ಯದ ವಿದೇಶಿ ಹಣ ವಶಪಡಿಸಿಕೊಳ್ಳಲಾಗಿದೆ.

Ramesh Babu

Journalist

Recent Posts

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

13 hours ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

16 hours ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

1 day ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

1 day ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

1 day ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

1 day ago