ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ ಪ್ರಮುಖ ಅಂಶಗಳು ಇಲ್ಲಿದೆ ಓದಿ…
ಕಸ್ತೂರಿ ರಂಗನ್ ವರದಿ ಮತ್ತು ಭೌತಿಕ ಸಮೀಕ್ಷೆ ಕುರಿತು:
• ಕಸ್ತೂರಿ ರಂಗನ್ ಸಮಿತಿಯು ಉಪಗ್ರಹಗಳ ಮೂಲಕ ಜಿಪಿಎಸ್ ಸಮೀಕ್ಷೆ ಮಾಡಿದ್ದು, ಕಾಫಿ, ಅಡಿಕೆ, ರಬ್ಬರ್ ತೋಟವನ್ನು ಕಾಡು ಎಂದು ಪರಿಗಣಿಸಿದೆ; ಈ ವರದಿಯಿಂದ ಜಿಲ್ಲೆಯಲ್ಲಿ 138 ಹಳ್ಳಿಗಳು ಹಾಗೂ ರಾಜ್ಯದಲ್ಲಿ 1,449 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಅಧಿಸೂಚನೆ ಮಾಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ.
• ಕೇರಳದಲ್ಲಿ ಉಮರ್ ಸಮಿತಿ ಎಂಬ ಉನ್ನತ ಮಟ್ಟದ ಅಧಿಕಾರಿ ಸಮಿತಿ ಮೂಲಕ ಭೌತಿಕ ಸಮೀಕ್ಷೆ ನಡೆಸಿ, ನಾಡು-ಕಾಡನ್ನು ಬೇರ್ಪಡಿಸಿ 5,000 ಚ.ಕಿ.ಮೀ ಪ್ರದೇಶವನ್ನು ವರದಿಯಿಂದ ಮುಕ್ತಗೊಳಿಸಲಾಗಿದೆ; ಅದೇ ಮಾದರಿಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸುವಂತೆ ರೈತ ಮುಖಂಡರು ಸಲಹೆ ನೀಡಿದ್ದಾರೆ.
• 2022ರಲ್ಲಿ ಸಂಜಯ್ ಕುಮಾರ್ ಎಂಬ ಅಧಿಕಾರಿಯಿಂದ ವರದಿ ನೀಡಲು 2027ರವರೆಗೆ ಕಾಲಾವಕಾಶ ನೀಡಿರುವ ವಿಚಾರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು; ಅಗತ್ಯ ಬಿದ್ದರೆ ಕೇಂದ್ರಕ್ಕೆ ಪ್ರತ್ಯೇಕ ನಿಯೋಗ ಕರೆದೊಯ್ಯಲಾಗುವುದು.
• ಈ ವರದಿಗೆ ಸಂಬಂಧಿಸಿದಂತೆ ಈಗ 7ನೇ ಬಾರಿಗೆ ಅಧಿಸೂಚನೆ ಹೊರಡಿಸಿದ್ದು, ಇದು ಸಾಡೇಸಾತಿಯಂತಾಗಿದೆ; ಮಲೆನಾಡು ಹಾಗೂ ಕರಾವಳಿ ಭಾಗವನ್ನು ವಿಶೇಷ ಕೃಷಿ ವಲಯ ಎಂದು ಘೋಷಿಸಬೇಕು ಮತ್ತು ಮೀಸಲು ಜಲ ಪ್ರಮಾಣ ಘೋಷಣೆ ಮಾಡಬೇಕು ಎಂಬ ಬೇಡಿಕೆಗಳಿದ್ದು, ಈ ಸಮಸ್ಯೆಗಳನ್ನು ನಿವಾರಣೆ ಮಾಡುವ ವಿಶ್ವಾಸವಿದೆ.
ಸರ್ಕಾರದ ಮುಂದಿನ ನಡೆ ಹಾಗೂ ಅಧಿವೇಶನದ ತೀರ್ಮಾನ:
• ಪರಿಸರ ಸೂಕ್ಷ್ಮ ವಲಯ ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು, ರಾಜ್ಯದ ಹಿತಕ್ಕಾಗಿ ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡಲು ನಮ್ಮ ಸರ್ಕಾರ ಕೆಲಸ ಮಾಡಲಿದೆ; ಈ ಕುರಿತು ಅಂತಿಮ ತೀರ್ಮಾನಕ್ಕೆ ಬರುವ ಮುನ್ನ ಜನರ ಅಭಿಪ್ರಾಯ ಸಂಗ್ರಹಿಸಲು ಬಂದಿರುವೆ.
• ವಿರೋಧ ಪಕ್ಷದವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡದ ಕಾರಣ ಶಾಸಕರ ಜೊತೆ ಚರ್ಚಿಸಲಾಗಿದ್ದು, ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಜನರ ಅಭಿಪ್ರಾಯ ಪಡೆದು ರೈತರ ಬದುಕು ಉಳಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ.
• ರಾಜ್ಯದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕೇಂದ್ರದ ಮಾರ್ಗಸೂಚಿಯಂತೆ ಉಳಿದ ಕಡೆ ಅಧ್ಯಯನ ನಡೆಯುತ್ತಿದೆ; ಒಂದೆರಡು ದಿನಗಳಲ್ಲಿ ಮತ್ತೊಂದು ಪಟ್ಟಿ ಬಿಡುಗಡೆಯಾಗಲಿದ್ದು, ವಿಶೇಷ ಅಧಿವೇಶನದಲ್ಲಿ ಬರ ಹಾಗೂ ಕಸ್ತೂರಿ ರಂಗನ್ ವರದಿ ಬಗ್ಗೆ ವಿಸ್ತೃತ ಚರ್ಚೆ ಮಾಡಲಾಗುವುದು.
ಅರಣ್ಯವಾಸಿಗಳ ಹಕ್ಕು ಮತ್ತು ಭೂಮಿ ಒದಗಿಸುವಿಕೆ:
• ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ರೈತರಿಗೆ ಯಾವುದೇ ರೀತಿ ತೊಂದರೆ ಕೊಡಬಾರದು ಮತ್ತು ರೈತರು ಈಗಾಗಲೇ ಉಳುಮೆ ಮಾಡುತ್ತಿರುವ ಜಮೀನನ್ನು ಕಾಪಾಡಿಕೊಳ್ಳಬೇಕು; ಆದರೆ ಹೊಸದಾಗಿ ಯಾರೂ ಒತ್ತುವರಿ ಮಾಡಬಾರದು, ಮಾಡಿದರೆ ಅವಕಾಶ ನೀಡುವುದಿಲ್ಲ.
• ನಮ್ಮ ಹಿಂದಿನ ಸರ್ಕಾರಗಳು ಉಳುವವನಿಗೆ ಭೂಮಿ, ಬಗರ್ ಹುಕುಂ ಜಾರಿಗೆ ತಂದಿದ್ದು, ಬಾಕಿ ಇರುವ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು; ಕಾಫಿ ಲೀಸ್, ಫಾರಂ 57 ವಿಚಾರ ಹಾಗೂ ಅರಣ್ಯ ಹಕ್ಕು ಕಾಯ್ದೆಯಲ್ಲಿ ಎಲ್ಲರಿಗೂ 25 ವರ್ಷ ನಿಗದಿ ಮಾಡಲು ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಸ್ಥಳೀಯ ಅಭಿವೃದ್ಧಿ ಹಾಗೂ ಸಚಿವ ಸಂಪುಟ ಸಭೆ:
• ನನ್ನ ಕಷ್ಟಕಾಲದಲ್ಲಿ ಬೆನ್ನಿಗೆ ನಿಂತು, ಅಧಿಕಾರ ಕೊಟ್ಟು ಶಕ್ತಿ ನೀಡಿದ್ದೀರಿ; ದೇವರು ಕೊಟ್ಟಿರುವ ಅವಕಾಶದಲ್ಲಿ ನಿಮ್ಮ ಸೇವೆಗೆ ಸಂಕಲ್ಪ ಮಾಡಿದ್ದೇನೆ.
• ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು; ಎಲ್ಲಾ ಸಮಸ್ಯೆಗಳು ಬಗೆಹರಿಯದಿದ್ದರೂ, ಪಿಂಚಣಿ ಹಾಗೂ ನಿವೇಶನ ರಹಿತರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಮುಂದಾಗುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…