ಕಸ ವಿಂಗಡಣೆ ಘಟಕದ ಮೇಲೆ ಅಧಿಕಾರಿಗಳ ದಾಳಿ: ಶಾಲೆಯಿಂದ ಹೊರಗುಳಿದ 09 ಮಕ್ಕಳ ರಕ್ಷಣೆ

ಮಕ್ಕಳ ಸಹಾಯವಾಣಿಗೆ ಬ೦ದ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಬುಧವಾರ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ತಪಾಸಣೆ ವೇಳೆಯಲ್ಲಿ ಯಾವುದೇ ಮಕ್ಕಳು ಕೆಲಸ ನಿರ್ವಹಿಸುತ್ತಿರುವುದು ಪತ್ತೆಯಾಗಿಲ್ಲ. ಆದರೆ 09 ಮಕ್ಕಳು ಶಾಲೆಯಿಂದ ಹೊರ ಉಳಿದು ಪೋಷಕರ ಜೊತೆಯಲ್ಲಿ ವಾಸವಾಗಿದ್ದರು. ಇವರು ಮೂಲತಃ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದವರು.

ತಪಾಸಣೆ ವೇಳೆ ಸಿಕ್ಕಂತಹ ಮಕ್ಕಳನ್ನು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸರ್ವೋದಯ ಸರ್ವಿಸ್ ಸೊಸೈಟಿಯಲ್ಲಿ ಪುನರ್ ವಸತಿಗೊಳಿಸಿ, ದೇವನಹಳ್ಳಿಯ ಬಾಲಕಿಯರ ಬಾಲ ಮಂದಿರಕ್ಕೆ ಹಸ್ತಾಂತರಿಸಲಾಯಿತು.
ಮುಂದಿನ ಶುಕ್ರವಾರದಂದು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗುವುದು.

ಈ ತಪಾಸಣೆ ವೇಳೆ ಕಸ ವಿಂಗಡಣೆ ಘಟಕದಲ್ಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳು ಇಲ್ಲದಿರುವುದರಿಂದ ಅಧಿಕಾರಿಗಳ ಗಮನಕ್ಕೆ ಬಂದಿದೆ, ಮಕ್ಕಳು ಹಾಗೂ ಪೋಷಕರನ್ನು ಕಸ ವಿಂಗಡಣೆ ಘಟಕದಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುವುದಕ್ಕೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶೆಡ್ ಗಳನ್ನು ನಿರ್ಮಿಸಿಕೊಡಬೇಕೆಂದು ಕಸ ವಿಂಗಡಣೆ ಘಟಕದ ಗುತ್ತಿಗೆದಾರರಿಗೆ ಅಧಿಕಾರಿಗಳು ಸೂಚಿಸಿದರು.

ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕ ಅಂಬಿಕಾ, ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಸಂಜು, ಬಿಇಓ ಕಚೇರಿಯ ನಾಗಪ್ಪ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೌಮ್ಯ ಹಾಜರಿದ್ದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

42 minutes ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

1 hour ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

2 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

4 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

7 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

10 hours ago