ಕಸ ವಿಂಗಡಣೆ ಘಟಕದ ಮೇಲೆ ಅಧಿಕಾರಿಗಳ ದಾಳಿ: ಶಾಲೆಯಿಂದ ಹೊರಗುಳಿದ 09 ಮಕ್ಕಳ ರಕ್ಷಣೆ

ಮಕ್ಕಳ ಸಹಾಯವಾಣಿಗೆ ಬ೦ದ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಬುಧವಾರ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ತಪಾಸಣೆ ವೇಳೆಯಲ್ಲಿ ಯಾವುದೇ ಮಕ್ಕಳು ಕೆಲಸ ನಿರ್ವಹಿಸುತ್ತಿರುವುದು ಪತ್ತೆಯಾಗಿಲ್ಲ. ಆದರೆ 09 ಮಕ್ಕಳು ಶಾಲೆಯಿಂದ ಹೊರ ಉಳಿದು ಪೋಷಕರ ಜೊತೆಯಲ್ಲಿ ವಾಸವಾಗಿದ್ದರು. ಇವರು ಮೂಲತಃ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದವರು.

ತಪಾಸಣೆ ವೇಳೆ ಸಿಕ್ಕಂತಹ ಮಕ್ಕಳನ್ನು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸರ್ವೋದಯ ಸರ್ವಿಸ್ ಸೊಸೈಟಿಯಲ್ಲಿ ಪುನರ್ ವಸತಿಗೊಳಿಸಿ, ದೇವನಹಳ್ಳಿಯ ಬಾಲಕಿಯರ ಬಾಲ ಮಂದಿರಕ್ಕೆ ಹಸ್ತಾಂತರಿಸಲಾಯಿತು.
ಮುಂದಿನ ಶುಕ್ರವಾರದಂದು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗುವುದು.

ಈ ತಪಾಸಣೆ ವೇಳೆ ಕಸ ವಿಂಗಡಣೆ ಘಟಕದಲ್ಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳು ಇಲ್ಲದಿರುವುದರಿಂದ ಅಧಿಕಾರಿಗಳ ಗಮನಕ್ಕೆ ಬಂದಿದೆ, ಮಕ್ಕಳು ಹಾಗೂ ಪೋಷಕರನ್ನು ಕಸ ವಿಂಗಡಣೆ ಘಟಕದಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುವುದಕ್ಕೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶೆಡ್ ಗಳನ್ನು ನಿರ್ಮಿಸಿಕೊಡಬೇಕೆಂದು ಕಸ ವಿಂಗಡಣೆ ಘಟಕದ ಗುತ್ತಿಗೆದಾರರಿಗೆ ಅಧಿಕಾರಿಗಳು ಸೂಚಿಸಿದರು.

ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕ ಅಂಬಿಕಾ, ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಸಂಜು, ಬಿಇಓ ಕಚೇರಿಯ ನಾಗಪ್ಪ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೌಮ್ಯ ಹಾಜರಿದ್ದರು.

Ramesh Babu

Journalist

Recent Posts

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

5 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

9 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

12 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 days ago