ಮಕ್ಕಳ ಸಹಾಯವಾಣಿಗೆ ಬ೦ದ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಬುಧವಾರ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.
ತಪಾಸಣೆ ವೇಳೆಯಲ್ಲಿ ಯಾವುದೇ ಮಕ್ಕಳು ಕೆಲಸ ನಿರ್ವಹಿಸುತ್ತಿರುವುದು ಪತ್ತೆಯಾಗಿಲ್ಲ. ಆದರೆ 09 ಮಕ್ಕಳು ಶಾಲೆಯಿಂದ ಹೊರ ಉಳಿದು ಪೋಷಕರ ಜೊತೆಯಲ್ಲಿ ವಾಸವಾಗಿದ್ದರು. ಇವರು ಮೂಲತಃ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದವರು.
ತಪಾಸಣೆ ವೇಳೆ ಸಿಕ್ಕಂತಹ ಮಕ್ಕಳನ್ನು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸರ್ವೋದಯ ಸರ್ವಿಸ್ ಸೊಸೈಟಿಯಲ್ಲಿ ಪುನರ್ ವಸತಿಗೊಳಿಸಿ, ದೇವನಹಳ್ಳಿಯ ಬಾಲಕಿಯರ ಬಾಲ ಮಂದಿರಕ್ಕೆ ಹಸ್ತಾಂತರಿಸಲಾಯಿತು.
ಮುಂದಿನ ಶುಕ್ರವಾರದಂದು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗುವುದು.
ಈ ತಪಾಸಣೆ ವೇಳೆ ಕಸ ವಿಂಗಡಣೆ ಘಟಕದಲ್ಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳು ಇಲ್ಲದಿರುವುದರಿಂದ ಅಧಿಕಾರಿಗಳ ಗಮನಕ್ಕೆ ಬಂದಿದೆ, ಮಕ್ಕಳು ಹಾಗೂ ಪೋಷಕರನ್ನು ಕಸ ವಿಂಗಡಣೆ ಘಟಕದಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುವುದಕ್ಕೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶೆಡ್ ಗಳನ್ನು ನಿರ್ಮಿಸಿಕೊಡಬೇಕೆಂದು ಕಸ ವಿಂಗಡಣೆ ಘಟಕದ ಗುತ್ತಿಗೆದಾರರಿಗೆ ಅಧಿಕಾರಿಗಳು ಸೂಚಿಸಿದರು.
ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕ ಅಂಬಿಕಾ, ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಸಂಜು, ಬಿಇಓ ಕಚೇರಿಯ ನಾಗಪ್ಪ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೌಮ್ಯ ಹಾಜರಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…