ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸ ದೇಶ ಮರೆತಿಲ್ಲ- ಬಿಜೆಪಿ‌ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ,

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸವನ್ನು ದೇಶ ಮರೆತಿಲ್ಲ. ಸಿಬಿಐಗೆ ಏಳೆಂಟು ಪ್ರಕರಣಗಳನ್ನು ಕೊಟ್ಟೆವು ಎಂದು ಹೇಳುತ್ತೀರಿ, ಆದರೆ ಅರ್ಕಾವತಿ ಲೇಔಟ್ ರೀ-ಡೂ ಹಗರಣ, ಕೆಂಪಣ್ಣ ಆಯೋಗದ ವರದಿ ಏನಾಯಿತು? ಅದನ್ನು ಮುಚ್ಚಿ ಹಾಕಲು ಎಸಿಬಿ ರಚಿಸಿ, ಲೋಕಾಯುಕ್ತದ ಕತ್ತು ಹಿಸುಕಿದ್ದು ಯಾರು? ಎಂದು ಸಿಎಂ ಸಿದ್ದರಾಮಯ್ಯನವರನ್ನು ಕರ್ನಾಟಕ ಬಿಜೆಪಿ ಪ್ರಶ್ನೆ ಮಾಡಿದೆ….

ಬಿಜೆಪಿ ಅಧಿಕಾರದಲ್ಲಿದ್ದಾಗ ಪಾರದರ್ಶಕತೆಗೆ ಆದ್ಯತೆ ನೀಡಿದೆ, ಈಗಿನ ನಿಮ್ಮ ಸರ್ಕಾರಕ್ಕೆ ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಗಳ ತನಿಖೆಗಳಿಂದ ತಮ್ಮ ಕುರ್ಚಿ ಕಳೆದುಕೊಳ್ಳುವ ಸನ್ನಿವೇಶ ಸೃಷ್ಟಿಯಾಗಬಹುದು ಎಂಬ ಭಯ ನಿಮಗೆ ಶುರುವಾಗಿರಬಹುದು! ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಿಡಿಕಾರಿದೆ.

ಬಳ್ಳಾರಿಯ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಅದೇ ಜಿಲ್ಲೆಯ ಜನರ ಮತ ಪಡೆದು ಗೆದ್ದ ಜನಪ್ರತಿನಿಧಿಗಳನ್ನು ಗೌರವಿಸುವುದನ್ನು ಕಲಿಯಲಿ. ನ್ಯಾಯಾಲಯದ ಆದೇಶಗಳನ್ನು ಬಿಜೆಪಿ ಮೇಲೆ ಹೊರಿಸುವುದು ಮೂರ್ಖತನ. ಅಂದು ಸಿದ್ದರಾಮಯ್ಯನವರು ಬಳ್ಳಾರಿಯಲ್ಲಿ ಸಭೆಗೆ ಜಾಗ ಸಿಗಲಿಲ್ಲ ಎಂದು ಹಳಹಳಿಸುತ್ತಿದ್ದಾರೆ. ಆದರೆ ಇಂದು ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸದಂತೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಹೇರುವುದು, ನಮ್ಮ ಕಾರ್ಯಕರ್ತರನ್ನು ಬಂಧಿಸುವುದು ಯಾವ ಪ್ರಜಾಪ್ರಭುತ್ವ? ಇದು ಅಪ್ಪಟ ತುರ್ತು ಪರಿಸ್ಥಿತಿಯ ಮನಸ್ಥಿತಿಯಲ್ಲದೆ ಮತ್ತೇನು? ಎಂದು ಪ್ರಶ್ನೆ ಮಾಡಿದೆ….

ಸಂವಿಧಾನದ ಹೆಸರಿನಲ್ಲಿ ಅಧಿವೇಶನ ಕರೆದು, ಅಲ್ಲಿ ಕೇವಲ ಕೇಂದ್ರ ಸರ್ಕಾರವನ್ನು ದೂಷಿಸಲು ಮತ್ತು ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಸಮಯ ವ್ಯರ್ಥ ಮಾಡುತ್ತಿರುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜನರ ಜ್ವಲಂತ ಸಮಸ್ಯೆಗಳಾದ ಬರಗಾಲ, ರೈತರ ಆತ್ಮಹತ್ಯೆ, ಅಭಿವೃದ್ಧಿ ಕಾರ್ಯಗಳು ಮತ್ತು ಮೂಲಸೌಕರ್ಯದ ಬಗ್ಗೆ ಚರ್ಚಿಸಲು ನಿಮಗೆ ಪುರುಸೊತ್ತಿಲ್ಲ. ಕೇವಲ ರಾಜಕೀಯ ಪ್ರಹಸನಕ್ಕಾಗಿ ವಿಶೇಷ ಅಧಿವೇಶನ ಮಾಡುವುದೇ ನಿಮ್ಮ ಕಾಯಕ ಎನ್ನುವುದನ್ನು ನಾಡಿನ ಜನಸಾಮಾನ್ಯರೇ ಹೇಳುತ್ತಿದ್ದಾರೆ ಎಂದು ಹೇಳಿದೆ…

ಮನರೇಗಾ ಅಥವಾ ಯಾವುದೇ ಯೋಜನೆಯನ್ನು ಬಿಜೆಪಿಗರು ಹಾಳು ಮಾಡುತ್ತಿಲ್ಲ, ಬದಲಾಗಿ ಅದರಲ್ಲಿರುವ ಭ್ರಷ್ಟಾಚಾರವನ್ನು ತಡೆದು ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದೆ. ಕಾಂಗ್ರೆಸ್ ಕೇವಲ ಘೋಷಣೆಗಳಿಗೆ ಸೀಮಿತವಾಗಿತ್ತು ಎಂದು ತಿಳಿಸಿದೆ…

ಮೋದಿ ಸರ್ಕಾರವು ವಿಕಸಿತ ಭಾರತದ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಉದ್ಯೋಗ ಮತ್ತು ಭದ್ರತೆ ನೀಡುತ್ತಿದೆ. ಇದನ್ನು ಸಹಿಸಲಾಗದೆ ಕಾಂಗ್ರೆಸ್ಸಿಗರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಕೇವಲ ಯೋಜನೆಯ ಹೆಸರು ಬದಲಾವಣೆಯಲ್ಲ, ಹಣೆಬರಹವೇ ಬದಲಾಗಿದೆ. ಶ್ರಮಿಕ ಕಾರ್ಮಿಕರ ಬದುಕು ಬದಲಿಸುವ ಭರವಸೆಯ ಬೆಳಕಾಗಿದೆ ಎಂದು ಹೇಳಿದೆ..

ಸಿದ್ದರಾಮಯ್ಯನವರೇ, ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಹೆಸರಿನಲ್ಲಿ ನಾಟಕವಾಡುವುದನ್ನು ನಿಲ್ಲಿಸಿ, ನಿಮ್ಮ ಆಡಳಿತದಲ್ಲಿ ರಾಜ್ಯದ ಬೊಕ್ಕಸ ಬರಿದಾಗಿ, ಜನಪರ ಅಭಿವೃದ್ಧಿ ಶೂನ್ಯವಾಗಿದೆ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವುದು ನಿಮ್ಮ ಅಸಮರ್ಥತೆಯ ಪರಮಾವಧಿ. ಜನರ ತೆರಿಗೆ ಹಣವನ್ನು ಹಗರಣಗಳಿಗೆ ಬಲಿ ಕೊಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದೆ…

ಅಭಿವೃದ್ಧಿ ಮರೆತು ಗೂಂಡಾಗಿರಿ ಮತ್ತು ಭ್ರಷ್ಟಾಚಾರಕ್ಕೆ ಮಣೆ ಹಾಕುತ್ತಿರುವ ನೀವು, ಅಧಿಕಾರದಲ್ಲಿರಲು ಲಾಯಕ್ಕಿಲ್ಲ. ಆಡಳಿತ ವೈಫಲ್ಯ ಒಪ್ಪಿಕೊಂಡು ತಕ್ಷಣ ರಾಜೀನಾಮೆ ನೀಡಿ ಅಧಿಕಾರದಿಂದ ತೊಲಗುವುದೇ ರಾಜ್ಯದ ಜನತೆಗೆ ನೀವು ಮಾಡುವ ದೊಡ್ಡ ಉಪಕಾರ ಎಂದು ಹೇಳಿದೆ….

Ramesh Babu

Journalist

Recent Posts

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

3 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

4 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

5 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

15 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

16 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

16 hours ago