ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸ ದೇಶ ಮರೆತಿಲ್ಲ- ಬಿಜೆಪಿ‌ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ,

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸವನ್ನು ದೇಶ ಮರೆತಿಲ್ಲ. ಸಿಬಿಐಗೆ ಏಳೆಂಟು ಪ್ರಕರಣಗಳನ್ನು ಕೊಟ್ಟೆವು ಎಂದು ಹೇಳುತ್ತೀರಿ, ಆದರೆ ಅರ್ಕಾವತಿ ಲೇಔಟ್ ರೀ-ಡೂ ಹಗರಣ, ಕೆಂಪಣ್ಣ ಆಯೋಗದ ವರದಿ ಏನಾಯಿತು? ಅದನ್ನು ಮುಚ್ಚಿ ಹಾಕಲು ಎಸಿಬಿ ರಚಿಸಿ, ಲೋಕಾಯುಕ್ತದ ಕತ್ತು ಹಿಸುಕಿದ್ದು ಯಾರು? ಎಂದು ಸಿಎಂ ಸಿದ್ದರಾಮಯ್ಯನವರನ್ನು ಕರ್ನಾಟಕ ಬಿಜೆಪಿ ಪ್ರಶ್ನೆ ಮಾಡಿದೆ….

ಬಿಜೆಪಿ ಅಧಿಕಾರದಲ್ಲಿದ್ದಾಗ ಪಾರದರ್ಶಕತೆಗೆ ಆದ್ಯತೆ ನೀಡಿದೆ, ಈಗಿನ ನಿಮ್ಮ ಸರ್ಕಾರಕ್ಕೆ ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಗಳ ತನಿಖೆಗಳಿಂದ ತಮ್ಮ ಕುರ್ಚಿ ಕಳೆದುಕೊಳ್ಳುವ ಸನ್ನಿವೇಶ ಸೃಷ್ಟಿಯಾಗಬಹುದು ಎಂಬ ಭಯ ನಿಮಗೆ ಶುರುವಾಗಿರಬಹುದು! ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಿಡಿಕಾರಿದೆ.

ಬಳ್ಳಾರಿಯ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಅದೇ ಜಿಲ್ಲೆಯ ಜನರ ಮತ ಪಡೆದು ಗೆದ್ದ ಜನಪ್ರತಿನಿಧಿಗಳನ್ನು ಗೌರವಿಸುವುದನ್ನು ಕಲಿಯಲಿ. ನ್ಯಾಯಾಲಯದ ಆದೇಶಗಳನ್ನು ಬಿಜೆಪಿ ಮೇಲೆ ಹೊರಿಸುವುದು ಮೂರ್ಖತನ. ಅಂದು ಸಿದ್ದರಾಮಯ್ಯನವರು ಬಳ್ಳಾರಿಯಲ್ಲಿ ಸಭೆಗೆ ಜಾಗ ಸಿಗಲಿಲ್ಲ ಎಂದು ಹಳಹಳಿಸುತ್ತಿದ್ದಾರೆ. ಆದರೆ ಇಂದು ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸದಂತೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಹೇರುವುದು, ನಮ್ಮ ಕಾರ್ಯಕರ್ತರನ್ನು ಬಂಧಿಸುವುದು ಯಾವ ಪ್ರಜಾಪ್ರಭುತ್ವ? ಇದು ಅಪ್ಪಟ ತುರ್ತು ಪರಿಸ್ಥಿತಿಯ ಮನಸ್ಥಿತಿಯಲ್ಲದೆ ಮತ್ತೇನು? ಎಂದು ಪ್ರಶ್ನೆ ಮಾಡಿದೆ….

ಸಂವಿಧಾನದ ಹೆಸರಿನಲ್ಲಿ ಅಧಿವೇಶನ ಕರೆದು, ಅಲ್ಲಿ ಕೇವಲ ಕೇಂದ್ರ ಸರ್ಕಾರವನ್ನು ದೂಷಿಸಲು ಮತ್ತು ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಸಮಯ ವ್ಯರ್ಥ ಮಾಡುತ್ತಿರುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜನರ ಜ್ವಲಂತ ಸಮಸ್ಯೆಗಳಾದ ಬರಗಾಲ, ರೈತರ ಆತ್ಮಹತ್ಯೆ, ಅಭಿವೃದ್ಧಿ ಕಾರ್ಯಗಳು ಮತ್ತು ಮೂಲಸೌಕರ್ಯದ ಬಗ್ಗೆ ಚರ್ಚಿಸಲು ನಿಮಗೆ ಪುರುಸೊತ್ತಿಲ್ಲ. ಕೇವಲ ರಾಜಕೀಯ ಪ್ರಹಸನಕ್ಕಾಗಿ ವಿಶೇಷ ಅಧಿವೇಶನ ಮಾಡುವುದೇ ನಿಮ್ಮ ಕಾಯಕ ಎನ್ನುವುದನ್ನು ನಾಡಿನ ಜನಸಾಮಾನ್ಯರೇ ಹೇಳುತ್ತಿದ್ದಾರೆ ಎಂದು ಹೇಳಿದೆ…

ಮನರೇಗಾ ಅಥವಾ ಯಾವುದೇ ಯೋಜನೆಯನ್ನು ಬಿಜೆಪಿಗರು ಹಾಳು ಮಾಡುತ್ತಿಲ್ಲ, ಬದಲಾಗಿ ಅದರಲ್ಲಿರುವ ಭ್ರಷ್ಟಾಚಾರವನ್ನು ತಡೆದು ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದೆ. ಕಾಂಗ್ರೆಸ್ ಕೇವಲ ಘೋಷಣೆಗಳಿಗೆ ಸೀಮಿತವಾಗಿತ್ತು ಎಂದು ತಿಳಿಸಿದೆ…

ಮೋದಿ ಸರ್ಕಾರವು ವಿಕಸಿತ ಭಾರತದ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಉದ್ಯೋಗ ಮತ್ತು ಭದ್ರತೆ ನೀಡುತ್ತಿದೆ. ಇದನ್ನು ಸಹಿಸಲಾಗದೆ ಕಾಂಗ್ರೆಸ್ಸಿಗರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಕೇವಲ ಯೋಜನೆಯ ಹೆಸರು ಬದಲಾವಣೆಯಲ್ಲ, ಹಣೆಬರಹವೇ ಬದಲಾಗಿದೆ. ಶ್ರಮಿಕ ಕಾರ್ಮಿಕರ ಬದುಕು ಬದಲಿಸುವ ಭರವಸೆಯ ಬೆಳಕಾಗಿದೆ ಎಂದು ಹೇಳಿದೆ..

ಸಿದ್ದರಾಮಯ್ಯನವರೇ, ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಹೆಸರಿನಲ್ಲಿ ನಾಟಕವಾಡುವುದನ್ನು ನಿಲ್ಲಿಸಿ, ನಿಮ್ಮ ಆಡಳಿತದಲ್ಲಿ ರಾಜ್ಯದ ಬೊಕ್ಕಸ ಬರಿದಾಗಿ, ಜನಪರ ಅಭಿವೃದ್ಧಿ ಶೂನ್ಯವಾಗಿದೆ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವುದು ನಿಮ್ಮ ಅಸಮರ್ಥತೆಯ ಪರಮಾವಧಿ. ಜನರ ತೆರಿಗೆ ಹಣವನ್ನು ಹಗರಣಗಳಿಗೆ ಬಲಿ ಕೊಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದೆ…

ಅಭಿವೃದ್ಧಿ ಮರೆತು ಗೂಂಡಾಗಿರಿ ಮತ್ತು ಭ್ರಷ್ಟಾಚಾರಕ್ಕೆ ಮಣೆ ಹಾಕುತ್ತಿರುವ ನೀವು, ಅಧಿಕಾರದಲ್ಲಿರಲು ಲಾಯಕ್ಕಿಲ್ಲ. ಆಡಳಿತ ವೈಫಲ್ಯ ಒಪ್ಪಿಕೊಂಡು ತಕ್ಷಣ ರಾಜೀನಾಮೆ ನೀಡಿ ಅಧಿಕಾರದಿಂದ ತೊಲಗುವುದೇ ರಾಜ್ಯದ ಜನತೆಗೆ ನೀವು ಮಾಡುವ ದೊಡ್ಡ ಉಪಕಾರ ಎಂದು ಹೇಳಿದೆ….

Ramesh Babu

Journalist

Recent Posts

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

2 hours ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

3 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

20 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago