ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸ ದೇಶ ಮರೆತಿಲ್ಲ- ಬಿಜೆಪಿ‌ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ,

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು “ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್” ಆಗಿ ಬಳಸಿಕೊಂಡ ಕರಾಳ ಇತಿಹಾಸವನ್ನು ದೇಶ ಮರೆತಿಲ್ಲ. ಸಿಬಿಐಗೆ ಏಳೆಂಟು ಪ್ರಕರಣಗಳನ್ನು ಕೊಟ್ಟೆವು ಎಂದು ಹೇಳುತ್ತೀರಿ, ಆದರೆ ಅರ್ಕಾವತಿ ಲೇಔಟ್ ರೀ-ಡೂ ಹಗರಣ, ಕೆಂಪಣ್ಣ ಆಯೋಗದ ವರದಿ ಏನಾಯಿತು? ಅದನ್ನು ಮುಚ್ಚಿ ಹಾಕಲು ಎಸಿಬಿ ರಚಿಸಿ, ಲೋಕಾಯುಕ್ತದ ಕತ್ತು ಹಿಸುಕಿದ್ದು ಯಾರು? ಎಂದು ಸಿಎಂ ಸಿದ್ದರಾಮಯ್ಯನವರನ್ನು ಕರ್ನಾಟಕ ಬಿಜೆಪಿ ಪ್ರಶ್ನೆ ಮಾಡಿದೆ….

ಬಿಜೆಪಿ ಅಧಿಕಾರದಲ್ಲಿದ್ದಾಗ ಪಾರದರ್ಶಕತೆಗೆ ಆದ್ಯತೆ ನೀಡಿದೆ, ಈಗಿನ ನಿಮ್ಮ ಸರ್ಕಾರಕ್ಕೆ ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಗಳ ತನಿಖೆಗಳಿಂದ ತಮ್ಮ ಕುರ್ಚಿ ಕಳೆದುಕೊಳ್ಳುವ ಸನ್ನಿವೇಶ ಸೃಷ್ಟಿಯಾಗಬಹುದು ಎಂಬ ಭಯ ನಿಮಗೆ ಶುರುವಾಗಿರಬಹುದು! ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಿಡಿಕಾರಿದೆ.

ಬಳ್ಳಾರಿಯ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಅದೇ ಜಿಲ್ಲೆಯ ಜನರ ಮತ ಪಡೆದು ಗೆದ್ದ ಜನಪ್ರತಿನಿಧಿಗಳನ್ನು ಗೌರವಿಸುವುದನ್ನು ಕಲಿಯಲಿ. ನ್ಯಾಯಾಲಯದ ಆದೇಶಗಳನ್ನು ಬಿಜೆಪಿ ಮೇಲೆ ಹೊರಿಸುವುದು ಮೂರ್ಖತನ. ಅಂದು ಸಿದ್ದರಾಮಯ್ಯನವರು ಬಳ್ಳಾರಿಯಲ್ಲಿ ಸಭೆಗೆ ಜಾಗ ಸಿಗಲಿಲ್ಲ ಎಂದು ಹಳಹಳಿಸುತ್ತಿದ್ದಾರೆ. ಆದರೆ ಇಂದು ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸದಂತೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಹೇರುವುದು, ನಮ್ಮ ಕಾರ್ಯಕರ್ತರನ್ನು ಬಂಧಿಸುವುದು ಯಾವ ಪ್ರಜಾಪ್ರಭುತ್ವ? ಇದು ಅಪ್ಪಟ ತುರ್ತು ಪರಿಸ್ಥಿತಿಯ ಮನಸ್ಥಿತಿಯಲ್ಲದೆ ಮತ್ತೇನು? ಎಂದು ಪ್ರಶ್ನೆ ಮಾಡಿದೆ….

ಸಂವಿಧಾನದ ಹೆಸರಿನಲ್ಲಿ ಅಧಿವೇಶನ ಕರೆದು, ಅಲ್ಲಿ ಕೇವಲ ಕೇಂದ್ರ ಸರ್ಕಾರವನ್ನು ದೂಷಿಸಲು ಮತ್ತು ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಸಮಯ ವ್ಯರ್ಥ ಮಾಡುತ್ತಿರುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜನರ ಜ್ವಲಂತ ಸಮಸ್ಯೆಗಳಾದ ಬರಗಾಲ, ರೈತರ ಆತ್ಮಹತ್ಯೆ, ಅಭಿವೃದ್ಧಿ ಕಾರ್ಯಗಳು ಮತ್ತು ಮೂಲಸೌಕರ್ಯದ ಬಗ್ಗೆ ಚರ್ಚಿಸಲು ನಿಮಗೆ ಪುರುಸೊತ್ತಿಲ್ಲ. ಕೇವಲ ರಾಜಕೀಯ ಪ್ರಹಸನಕ್ಕಾಗಿ ವಿಶೇಷ ಅಧಿವೇಶನ ಮಾಡುವುದೇ ನಿಮ್ಮ ಕಾಯಕ ಎನ್ನುವುದನ್ನು ನಾಡಿನ ಜನಸಾಮಾನ್ಯರೇ ಹೇಳುತ್ತಿದ್ದಾರೆ ಎಂದು ಹೇಳಿದೆ…

ಮನರೇಗಾ ಅಥವಾ ಯಾವುದೇ ಯೋಜನೆಯನ್ನು ಬಿಜೆಪಿಗರು ಹಾಳು ಮಾಡುತ್ತಿಲ್ಲ, ಬದಲಾಗಿ ಅದರಲ್ಲಿರುವ ಭ್ರಷ್ಟಾಚಾರವನ್ನು ತಡೆದು ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದೆ. ಕಾಂಗ್ರೆಸ್ ಕೇವಲ ಘೋಷಣೆಗಳಿಗೆ ಸೀಮಿತವಾಗಿತ್ತು ಎಂದು ತಿಳಿಸಿದೆ…

ಮೋದಿ ಸರ್ಕಾರವು ವಿಕಸಿತ ಭಾರತದ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಉದ್ಯೋಗ ಮತ್ತು ಭದ್ರತೆ ನೀಡುತ್ತಿದೆ. ಇದನ್ನು ಸಹಿಸಲಾಗದೆ ಕಾಂಗ್ರೆಸ್ಸಿಗರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಕೇವಲ ಯೋಜನೆಯ ಹೆಸರು ಬದಲಾವಣೆಯಲ್ಲ, ಹಣೆಬರಹವೇ ಬದಲಾಗಿದೆ. ಶ್ರಮಿಕ ಕಾರ್ಮಿಕರ ಬದುಕು ಬದಲಿಸುವ ಭರವಸೆಯ ಬೆಳಕಾಗಿದೆ ಎಂದು ಹೇಳಿದೆ..

ಸಿದ್ದರಾಮಯ್ಯನವರೇ, ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಹೆಸರಿನಲ್ಲಿ ನಾಟಕವಾಡುವುದನ್ನು ನಿಲ್ಲಿಸಿ, ನಿಮ್ಮ ಆಡಳಿತದಲ್ಲಿ ರಾಜ್ಯದ ಬೊಕ್ಕಸ ಬರಿದಾಗಿ, ಜನಪರ ಅಭಿವೃದ್ಧಿ ಶೂನ್ಯವಾಗಿದೆ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವುದು ನಿಮ್ಮ ಅಸಮರ್ಥತೆಯ ಪರಮಾವಧಿ. ಜನರ ತೆರಿಗೆ ಹಣವನ್ನು ಹಗರಣಗಳಿಗೆ ಬಲಿ ಕೊಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದೆ…

ಅಭಿವೃದ್ಧಿ ಮರೆತು ಗೂಂಡಾಗಿರಿ ಮತ್ತು ಭ್ರಷ್ಟಾಚಾರಕ್ಕೆ ಮಣೆ ಹಾಕುತ್ತಿರುವ ನೀವು, ಅಧಿಕಾರದಲ್ಲಿರಲು ಲಾಯಕ್ಕಿಲ್ಲ. ಆಡಳಿತ ವೈಫಲ್ಯ ಒಪ್ಪಿಕೊಂಡು ತಕ್ಷಣ ರಾಜೀನಾಮೆ ನೀಡಿ ಅಧಿಕಾರದಿಂದ ತೊಲಗುವುದೇ ರಾಜ್ಯದ ಜನತೆಗೆ ನೀವು ಮಾಡುವ ದೊಡ್ಡ ಉಪಕಾರ ಎಂದು ಹೇಳಿದೆ….

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

10 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

21 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago