ಕೋಲಾರ: ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇದ್ದರೂ ಸಾಮಾನ್ಯ ಜನರಿಗೆ ಉಪಯೋಗವಾಗುವ ಒಂದಾದರೂ ಯೋಜನೆ ತಂದಿದ್ದಾರಾ ಬರೀ ಜನರನ್ನು ಜಾತಿ ಧರ್ಮದ ಹೆಸರಿನಲ್ಲಿ ಕೋಮುಗಲಭೆಗಳನ್ನು ಸೃಷ್ಟಿಸಿದ್ದಾರೆ ನಿಮಗೆಲ್ಲ ಅವಕಾಶ ಬಂದಿದೆ ಸರಿಯಾಗಿ ಬಳಸಿಕೊಂಡು ಜನರ ನೆಮ್ಮದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ತಾಲೂಕಿನ ಸೂಲೂರು ಚೌಡದೇನಹಳ್ಳಿ, ಬೆಳ್ಳೂರು ಗ್ರಾಮಗಳಲ್ಲಿ ಶನಿವಾರ ನಡೆದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರವಾಗಿ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಪಕ್ಷವು ಬರೀ ಭರವಸೆಗಳನ್ನು ನೀಡಿ ಜನರನ್ನು ಯಾಮಾರಿಸಿದ್ದಾರೆ ಆದರೆ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನುಡಿದಂತೆ ಅಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ನಡೆದಿದ್ದೇವೆ ನೀವುಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡಿದ್ದು ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲ ನೀಡಬೇಕು ಪ್ರತಿ ಗ್ರಾಮಗಳಲ್ಲಿ ರಾಜ್ಯ ಸರಕಾರದಿಂದ ಅಭಿವೃದ್ದಿ ಪಡಿಸಲು ಕ್ರಮ ವಹಿಸಲಾಗಿದೆ ಮುಳಬಾಗಿಲಿನಲ್ಲಿ ನಾನು ಶಾಸಕನಾಗಿ ಅಭಿವೃದ್ದಿ ಪಡಿಸಲು ಕನಸ್ಸು ಕಂಡಿದ್ದೆ ಎರಡನೇ ಬಾರಿ ಅವಕಾಶ ಸಿಗಲಿಲ್ಲ ಆ ಕನಸ್ಸನ್ನು ಕೋಲಾರ ಕ್ಷೇತ್ರದಲ್ಲಿ ಈಡೇರಿಸಿ ಜನ ಪರವಾಗಿ ಆಡಳಿತ ನೀಡುವುದೇ ನನ್ನ ಗುರಿ ಎಂದು ಆಶ್ವಾಸನೆ ನೀಡಿದರು.
ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳಿಂದ ಅಭಿವೃದ್ಧಿ ಮಾಡಲ್ಲ ಎಂದು ಅಪಪ್ರಚಾರ ಮಾಡಲು ಹೊರಟಿದ್ದರೂ ಸಿದ್ದರಾಮಯ್ಯ ಯಾವುದೇ ಭ್ರಷ್ಟಾಚಾರ ಮಾಡದೇ ಕಮೀಷನ್ ಪಡೆಯದೇ ನೇರವಾಗಿ ಜನರ ಖಾತೆಗಳಿಗೆ ಹಣ ಜಮಾ ಮಾಡಿದ್ದಾರೆ ಬೇರೆ ಪಕ್ಷಗಳನ್ನು ದೂಷಿಸುವುದು ಬೇಡ ನಮ್ಮ ಅಭಿವೃದ್ದಿ ಕೆಲಸಗಳನ್ನು ತಿಳಿಸಿ ಪ್ರಚಾರ ಮಾಡಿ ಮತ ಕೇಳೋಣ ಈಗಾಗಲೇ ಜೆಡಿಎಸ್ ಬಿಜೆಪಿ ಮೈತ್ರಿ ಅಪವಿತ್ರವಾಗಿ ಮುಳುಗುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ ಅನಿಲ್ ಕುಮಾರ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಎಲ್ಲಿದೆ ಅಂತ ಕೇಳಿದ ವಿರೋಧ ಪಕ್ಷದವರಿಗೆ ಮತದಾರರು ಉತ್ತರ ಕೊಟ್ಟಿದ್ದಾರೆ ದಿನನಿತ್ಯ ಅಪಪ್ರಚಾರ ಮಾಡಿದರು ಆದರೆ ಗ್ರಾಮೀಣ ಭಾಗದಲ್ಲೂ ಸಹ ಕಾಂಗ್ರೆಸ್ ಎರಡನೇ ಸ್ಥಾನ ಗಳಿಸಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ೫ ಗ್ಯಾರೆಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದೆವು ಅದರಂತೆ ಸ್ಪಷ್ಟ ಬಹುಮತದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರು ತಿಂಗಳಲ್ಲಿ ೫ ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಕೇಂದ್ರ ಸರ್ಕಾರಕ್ಕೆ ಕೆಜಿ ಅಕ್ಕಿಗೆ ೩೪ ರೂ ಕೊಡುತ್ತೇವೆ ಎಂದರೂ ಅಕ್ಕಿ ಕೊಡಲಿಲ್ಲ ಅಕ್ಕಿ ಬದಲಾಗಿ ಜನರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ ಕೇಂದ್ರದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ ಮಹಿಳೆಯರಿಗೆ ೮ ಸಾವಿರ ಕೊಡುತ್ತೇವೆ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಭಾಗಕ್ಕೂ ವಿಸ್ತರಣೆ ಮಾಡಿ ಕನಿಷ್ಠ 400 ರೂಪಾಯಿ ಕೂಲಿ ನೀಡಲಾಗುತ್ತದೆ ಉದ್ಯೋಗ ಮಾಡಲು ಒಂದು ಲಕ್ಷ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ ಅದರಿಂದ ನಿಮ್ಮ ಬೆಂಬಲ ಕಾಂಗ್ರೆಸ್ ಪಕ್ಷದ ಮೇಲೆ ಇದ್ದು ಕೆ.ವಿ ಗೌತಮ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ನಾಗನಾಳ ಸೋಮಣ್ಣ, ಜಿಲ್ಲಾ ಸಹಕಾರಿ ಹಾಗೂ ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗದ್ದೆಕಣ್ಣೂರು ದಯಾನಂದ್, ಮುಖಂಡರಾದ ಉದಯಶಂಕರ್, ಮೈಲಾಂಡಹಳ್ಳಿ ಮುರಳಿ, ಖಾಜಿಕಲ್ಲಹಳ್ಳಿ ಮುನಿರಾಜು, ನಾರಾಯಣಸ್ವಾಮಿ, ಸತೀಶ್, ಮುಖಂಡರು ಇದ್ದರು
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…