Categories: ಕೋಲಾರ

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರವಾಗಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮತಯಾಚನೆ

ಕೋಲಾರ: ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಪರವಾಗಿ ಶನಿವಾರ ಶಾಲಾ ಕಾಲೇಜುಗಳಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಶಿಕ್ಷಕರ ಕ್ಷೇತ್ರದಿಂದ ಪ್ರತಿನಿಧಿಯಾಗಿ ಸ್ವತಃ ಶಿಕ್ಷಣ ಸಂಸ್ಥೆ ನಡೆಸುವ ಡಿ.ಟಿ ಶ್ರೀನಿವಾಸ್ ಅಭ್ಯರ್ಥಿಯಾಗಿದ್ದಾರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿ ಇದ್ದು ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡಿದೆ ಮುಂದಿನ ದಿನಗಳಲ್ಲಿ ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸಲಾಗುವುದು ದಯವಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

ಶಿಕ್ಷಕರ ಹಾಗೂ ಶೈಕ್ಷಣಿಕ ಸಮಸ್ಯೆಗಳನ್ನು ಸಮರ್ಥವಾಗಿ ಕಾಂಗ್ರೆಸ್ ಅಭ್ಯರ್ಥಿ ನಿಭಾಯಿಸಬಲ್ಲರು. ಶಿಕ್ಷಣ ವ್ಯವಸ್ಥೆ ಹಾಗೂ ಶಿಕ್ಷಕರ ಪರವಾಗಿ ನಿಲ್ಲುವಂತಹವರು. ಈ ನಂಬಿಕೆಯ ನೆಲೆಗಟ್ಟಿನಲ್ಲಿ ಶಿಕ್ಷಕರು ಕಳೆದ ಮೂರು ಬಾರಿ ಆಯ್ಕೆ ಮಾಡಿದ್ದರೂ ಸಮಸ್ಯೆಗಳು ಪರಿಹಾರವಾಗಿಲ್ಲ ನೂತನ ಪಿಂಚಣಿ ನೀತಿಯಿಂದ ನಿವೃತ್ತ ಶಿಕ್ಷಕರು, ನೌಕರರು ಬದುಕುವುದು ದುಸ್ತರವಾಗಿದೆ. ಎನ್‌ಪಿಎಸ್‌ ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿ ಜಾರಿಗೆ ತರಬೇಕು. ಆಳುವ ಪಕ್ಷವಿರುವ ಕಾರಣ ಶಿಕ್ಷಕರಿಗೆ ಅನುಕೂಲವಾಗುವುದರಿಂದ ಶಿಕ್ಷಕರು ಡಿ.ಟಿ ಶ್ರೀನಿವಾಸ್ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರವನ್ನು ಎನ್‌ಇಪಿ ಮೂಲಕ ನಾಶಗೊಳಿಸಲು ಹೊರಟಿದೆ ಕೇವಲ ಉಳ್ಳವರಿಗೆ ಶಿಕ್ಷಣವಾಗಿ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ ಕೆಳವರ್ಗದ ಜನರಿಗೆ ಭವಿಷ್ಯ ಇಲ್ಲದ ರೀತಿ ಮಾಡಿದೆ. ಆದರೆ ರಾಜ್ಯ ಸರ್ಕಾರ ಎಸ್‌ಇಪಿ ಮೂಲಕ ಭರವಸೆ ಮೂಡಿಸಿದೆ. ಶಿಕ್ಷಕರಿಗೆ ನೂರಾರು ಸಮಸ್ಯೆಗಳಿವೆ. ಬೋಧನೆಯನ್ನು ಮಾಡಲು ಸ್ವಾತಂತ್ರ್ಯಇಲ್ಲ. ಶಿಕ್ಷಕರಿಗೆ ಮಾನಸಿಕ ನೆಮ್ಮದಿ ಮುಖ್ಯ. ಕಳೆದ ಬಿಜೆಪಿ ಸರ್ಕಾರ ಶಿಕ್ಷಕರಿಗೆ ನೀಡಿದ್ದ ಕಾಲ್ಪನಿಕ ವೇತನ ಬಡ್ತಿಯನ್ನು ತಡೆಹಿಡಿಯಲು ಆದೇಶಿಸಿತು. ಇದನ್ನು ಸರಿಪಡಿಸಲು ಶ್ರೀನಿವಾಸ್ ಅವರ ಆಯ್ಕೆ ಅವಶ್ಯಕತೆಯಿದೆ ಗೆಲ್ಲಿಸಿ ಎಂದರು.

ಈ ಸಂದರ್ಭದಲ್ಲಿ ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಜನಪನಹಳ್ಳಿ ನವೀನ್ ಕುಮಾರ್ ಮುಖಂಡರಾದ ವೈ ಶಿವಕುಮಾರ್, ರಾಜಕುಮಾರ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು, ಶಿಕ್ಷಕರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago