ಕೋಲಾರ: ಜಿಲ್ಲಾ ಕಾಂಗ್ರೆಸ್ ಸಂಘಟನಾತ್ಮಕ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಕುಂಬಾರು ಸಮಾಜದ ಪ್ರಭಾವಿ ಮುಖಂಡರಾದ ಲಕ್ಷ್ಮಿನಾರಾಯಣ ಅವರ ಮೇಲೆ ನಡೆದ ಹಲ್ಲೆಯನ್ನು ನಮ್ಮ ಸಮಾಜವು ತೀವ್ರವಾಗಿ ಖಂಡಿಸಲಿದರ ಸಮುದಾಯವು ಅವರ ಪರವಾಗಿ ನಿಲ್ಲಲಿದೆ ಎಂದು ಜಿಲ್ಲಾ ಕುಂಬಾರ ಸಂಘ ಹಾಗೂ ದಕ್ಷಿಣ ಭಾರತ ಕುಂಬಾರರ ಫೆಡರೇಶನ್ ಯುವ ಘಟಕದ ಅಧ್ಯಕ್ಷ ಮಾಲೂರು ಡಾ.ನಾಗರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶನಿವಾರ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಕುಂಬಾರ ಸಮಾಜವು ರಾಜ್ಯದಲ್ಲಿ ಸಣ್ಣಪುಟ್ಟ ಸಮುದಾಯಗಳಲ್ಲಿ ಒಂದಾಗಿದ್ದು ಅಂತಹ ಸಮಾಜಕ್ಕೆ ಅಧಿಕಾರ ಸಿಗುವುದು ಕಷ್ಟ ವಿನಾಕಾರಣ ಹಲ್ಲೆ ಮತ್ತು ದೌರ್ಜನ್ಯ ಮಾಡಿರುವುದು ಖಂಡನೀಯವಾಗಿದ್ದು ಯಾವುದೇ ಪಕ್ಷದಲ್ಲಿ ಸಮುದಾಯದ ಮುಖಂಡರು ಬೆಳೆಯುತ್ತಿದ್ದರೆ ಅವರ ಬೆಂಬಲವಾಗಿ ಕುಂಬಾರ ಸಮುದಾಯವು ನಿಲ್ಲಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಲಕ್ಷ್ಮೀನಾರಾಯಣ ಅವರು ಪಕ್ಷದ ನಿಷ್ಠಾವಂತ ಮುಖಂಡರು ಜೊತೆಗೆ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದು ಅವರ ಮೇಲೆ ನಡೆದ ಹಲ್ಲೆಯಂತಹ ಘಟನೆಗಳು ಮುಂದೆ ಯಾರ ಮೇಲು ಕೂಡ ನಡೆಯಬಾರದು ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಜನಾಂಗ ವತಿಯಿಂದ ಉಗ್ರವಾಗ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕುಂಬಾರ ಸಮುದಾಯದ ಮುಖಂಡರಾದ ತಬಲ ನಾರಾಯಣಪ್ಪ, ಕಲ್ಲಂಡೂರು ಶ್ರೀನಿವಾಸಪ್ಪ, ನಾಗೇಶ್, ಗಂಗಾರಾಜು ಕೆಂಬೋಡಿ ಶ್ರೀನಿವಾಸ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…