ಕೋಲಾರ: ಜಿಲ್ಲಾ ಕಾಂಗ್ರೆಸ್ ಸಂಘಟನಾತ್ಮಕ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಕುಂಬಾರು ಸಮಾಜದ ಪ್ರಭಾವಿ ಮುಖಂಡರಾದ ಲಕ್ಷ್ಮಿನಾರಾಯಣ ಅವರ ಮೇಲೆ ನಡೆದ ಹಲ್ಲೆಯನ್ನು ನಮ್ಮ ಸಮಾಜವು ತೀವ್ರವಾಗಿ ಖಂಡಿಸಲಿದರ ಸಮುದಾಯವು ಅವರ ಪರವಾಗಿ ನಿಲ್ಲಲಿದೆ ಎಂದು ಜಿಲ್ಲಾ ಕುಂಬಾರ ಸಂಘ ಹಾಗೂ ದಕ್ಷಿಣ ಭಾರತ ಕುಂಬಾರರ ಫೆಡರೇಶನ್ ಯುವ ಘಟಕದ ಅಧ್ಯಕ್ಷ ಮಾಲೂರು ಡಾ.ನಾಗರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶನಿವಾರ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಕುಂಬಾರ ಸಮಾಜವು ರಾಜ್ಯದಲ್ಲಿ ಸಣ್ಣಪುಟ್ಟ ಸಮುದಾಯಗಳಲ್ಲಿ ಒಂದಾಗಿದ್ದು ಅಂತಹ ಸಮಾಜಕ್ಕೆ ಅಧಿಕಾರ ಸಿಗುವುದು ಕಷ್ಟ ವಿನಾಕಾರಣ ಹಲ್ಲೆ ಮತ್ತು ದೌರ್ಜನ್ಯ ಮಾಡಿರುವುದು ಖಂಡನೀಯವಾಗಿದ್ದು ಯಾವುದೇ ಪಕ್ಷದಲ್ಲಿ ಸಮುದಾಯದ ಮುಖಂಡರು ಬೆಳೆಯುತ್ತಿದ್ದರೆ ಅವರ ಬೆಂಬಲವಾಗಿ ಕುಂಬಾರ ಸಮುದಾಯವು ನಿಲ್ಲಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಲಕ್ಷ್ಮೀನಾರಾಯಣ ಅವರು ಪಕ್ಷದ ನಿಷ್ಠಾವಂತ ಮುಖಂಡರು ಜೊತೆಗೆ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದು ಅವರ ಮೇಲೆ ನಡೆದ ಹಲ್ಲೆಯಂತಹ ಘಟನೆಗಳು ಮುಂದೆ ಯಾರ ಮೇಲು ಕೂಡ ನಡೆಯಬಾರದು ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಜನಾಂಗ ವತಿಯಿಂದ ಉಗ್ರವಾಗ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕುಂಬಾರ ಸಮುದಾಯದ ಮುಖಂಡರಾದ ತಬಲ ನಾರಾಯಣಪ್ಪ, ಕಲ್ಲಂಡೂರು ಶ್ರೀನಿವಾಸಪ್ಪ, ನಾಗೇಶ್, ಗಂಗಾರಾಜು ಕೆಂಬೋಡಿ ಶ್ರೀನಿವಾಸ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…