Categories: ಕೋಲಾರ

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮೇಲೆ ಹಲ್ಲೆ: ಘಟನೆ ಖಂಡಿಸಿದ ಕುಂಬಾರ ಸಮಾಜ

ಕೋಲಾರ: ಜಿಲ್ಲಾ ಕಾಂಗ್ರೆಸ್ ಸಂಘಟನಾತ್ಮಕ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಕುಂಬಾರು ಸಮಾಜದ ಪ್ರಭಾವಿ ಮುಖಂಡರಾದ ಲಕ್ಷ್ಮಿನಾರಾಯಣ ಅವರ ಮೇಲೆ ನಡೆದ ಹಲ್ಲೆಯನ್ನು ನಮ್ಮ ಸಮಾಜವು ತೀವ್ರವಾಗಿ ಖಂಡಿಸಲಿದರ ಸಮುದಾಯವು ಅವರ ಪರವಾಗಿ ನಿಲ್ಲಲಿದೆ ಎಂದು ಜಿಲ್ಲಾ ಕುಂಬಾರ ಸಂಘ ಹಾಗೂ ದಕ್ಷಿಣ ಭಾರತ ಕುಂಬಾರರ ಫೆಡರೇಶನ್ ಯುವ ಘಟಕದ ಅಧ್ಯಕ್ಷ ಮಾಲೂರು ಡಾ.ನಾಗರಾಜ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶನಿವಾರ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಕುಂಬಾರ ಸಮಾಜವು ರಾಜ್ಯದಲ್ಲಿ ಸಣ್ಣಪುಟ್ಟ ಸಮುದಾಯಗಳಲ್ಲಿ ಒಂದಾಗಿದ್ದು ಅಂತಹ ಸಮಾಜಕ್ಕೆ ಅಧಿಕಾರ ಸಿಗುವುದು ಕಷ್ಟ ವಿನಾಕಾರಣ ಹಲ್ಲೆ ಮತ್ತು ದೌರ್ಜನ್ಯ ಮಾಡಿರುವುದು ಖಂಡನೀಯವಾಗಿದ್ದು ಯಾವುದೇ ಪಕ್ಷದಲ್ಲಿ ಸಮುದಾಯದ ಮುಖಂಡರು ಬೆಳೆಯುತ್ತಿದ್ದರೆ ಅವರ ಬೆಂಬಲವಾಗಿ ಕುಂಬಾರ ಸಮುದಾಯವು ನಿಲ್ಲಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಲಕ್ಷ್ಮೀನಾರಾಯಣ ಅವರು ಪಕ್ಷದ ನಿಷ್ಠಾವಂತ ಮುಖಂಡರು ಜೊತೆಗೆ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದು ಅವರ ಮೇಲೆ ನಡೆದ ಹಲ್ಲೆಯಂತಹ ಘಟನೆಗಳು ಮುಂದೆ ಯಾರ ಮೇಲು ಕೂಡ ನಡೆಯಬಾರದು ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಜನಾಂಗ ವತಿಯಿಂದ ಉಗ್ರವಾಗ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕುಂಬಾರ ಸಮುದಾಯದ ಮುಖಂಡರಾದ ತಬಲ ನಾರಾಯಣಪ್ಪ, ಕಲ್ಲಂಡೂರು ಶ್ರೀನಿವಾಸಪ್ಪ, ನಾಗೇಶ್, ಗಂಗಾರಾಜು ಕೆಂಬೋಡಿ ಶ್ರೀನಿವಾಸ್ ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

14 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

23 hours ago