ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆ ‘ಕೈ’ ಪಾಳಯದ ಟಿಕೆಟ್ ಆಕಾಂಕ್ಷಿಗಳ ಮಧ್ಯೆಯೇ ಭಿನ್ನಮತ ಸ್ಫೋಟಿಸುವ ಸಾಧ್ಯತೆ ಕಂಡುಬಂದಿದೆ.
ಹಾಲಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಕೆಪಿಸಿಸಿ ರಾಜ್ಯ ನಾಯಕರ ನಡೆಗೆ ಬೇಸತ್ತಿರುವ ಸ್ಥಳೀಯ ಸ್ವಾಭಿಮಾನಿ ಕಾಂಗ್ರೆಸ್ಸಿಗರೆಂದು ಬಿಂಬಿಸಿಕೊಂಡಿರುವ ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ನಾಳೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಮೂಲ ಕಾಂಗ್ರೆಸ್ಸಿಗ ಹಾಗೂ ಹಿರಿಯ ನಾಯಕ ತಿ.ರಂಗರಾಜು ಹಾಗೂ ಇತರ ಬೆಂಬಲಿಗರು ನಾಳಿನ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದು, ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
2023 ಸಾರ್ವತ್ರಿಕ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿ ಈಗಾಗಲೇ ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆ ನಾಳಿನ ಪತ್ರಿಕಾಗೋಷ್ಠಿ ಮಹತ್ವ ಪಡೆದುಕೊಂಡಿದೆ, ನಾಳೆ ಮಧ್ಯಾಹ್ನ 3 ಗಂಟೆಗೆ ನಗರದ ಪ್ರವಾಸಿ ಮಂದಿರ ಸರ್ಕಲ್ ( ಟಿ.ಬಿ ಸರ್ಕಲ್) ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿರುವ JCN ಕನ್ವೆನ್ಷನ್ ಹಾಲ್ ನಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…