ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆ ‘ಕೈ’ ಪಾಳಯದ ಟಿಕೆಟ್ ಆಕಾಂಕ್ಷಿಗಳ ಮಧ್ಯೆಯೇ ಭಿನ್ನಮತ ಸ್ಫೋಟಿಸುವ ಸಾಧ್ಯತೆ ಕಂಡುಬಂದಿದೆ.
ಹಾಲಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಕೆಪಿಸಿಸಿ ರಾಜ್ಯ ನಾಯಕರ ನಡೆಗೆ ಬೇಸತ್ತಿರುವ ಸ್ಥಳೀಯ ಸ್ವಾಭಿಮಾನಿ ಕಾಂಗ್ರೆಸ್ಸಿಗರೆಂದು ಬಿಂಬಿಸಿಕೊಂಡಿರುವ ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ನಾಳೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಮೂಲ ಕಾಂಗ್ರೆಸ್ಸಿಗ ಹಾಗೂ ಹಿರಿಯ ನಾಯಕ ತಿ.ರಂಗರಾಜು ಹಾಗೂ ಇತರ ಬೆಂಬಲಿಗರು ನಾಳಿನ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದು, ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
2023 ಸಾರ್ವತ್ರಿಕ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿ ಈಗಾಗಲೇ ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆ ನಾಳಿನ ಪತ್ರಿಕಾಗೋಷ್ಠಿ ಮಹತ್ವ ಪಡೆದುಕೊಂಡಿದೆ, ನಾಳೆ ಮಧ್ಯಾಹ್ನ 3 ಗಂಟೆಗೆ ನಗರದ ಪ್ರವಾಸಿ ಮಂದಿರ ಸರ್ಕಲ್ ( ಟಿ.ಬಿ ಸರ್ಕಲ್) ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿರುವ JCN ಕನ್ವೆನ್ಷನ್ ಹಾಲ್ ನಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿದೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…