ನಿರೀಕ್ಷೆಯಂತೆಯೇ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರವನ್ನು ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಹಂಚಿಕೊಂಡಿದೆ. ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿಗೆ ನಗರಸಭೆ ಚುಕ್ಕಾಣಿ ದೊರೆತಿದೆ.
ಸೋಮವಾರ ನಗರದ ನಗರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೊದಲೇ ಅಧಿಕಾರ ಹಂಚಿಕೆಯ ಒಪ್ಪಂದ ಮಾಡಿಕೊಂಡಿದ್ದವು. ಈ ಪ್ರಕ್ರಿಯೆ ಸುಗಮವಾಗಿ ಸಾಗುವ ಮೂಲಕ ಅಧ್ಯಕ್ಷ ಸ್ಥಾನವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವುದಕ್ಕಾಗಿ ಶಾಸಕ ಧೀರಜ್ ಮುನಿರಾಜು ರಣತಂತ್ರ ರೂಪಿಸಿದ್ದರು. ನಿರೀಕ್ಷೆಯಂತೆಯೇ ಅಧ್ಯಕ್ಷ ಸ್ಥಾನ ಬಿಜೆಪಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್ಗೆ ದೊರಕಿದೆ.
ಅಧ್ಯಕ್ಷ ಸ್ಥಾನಕ್ಕೆ ಕಮಲ-ದಳ ಮೈತ್ರಿಯಿಂದ ಸ್ಪರ್ಧಿಸಿದ್ದ ಸುಮಿತ್ರ ಆನಂದ್ (ಬಿಜೆಪಿ) ಅವರಿಗೆ ಸಂಸದ ಮತ್ತು ಶಾಸಕ ಇಬ್ಬರ ಮತ ಸೇರಿ 23 ಮತಗಳು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸ್ಥಾನಕ್ಕೆ ರೂಪಿಣಿ ಮಂಜುನಾಥ್ 10 ಮತಗಳು ದೊರೆತಿದ್ದು, 23 ಮತಗಳನ್ನು ಪಡೆದ ಸುಮಿತ್ರ ಆನಂದ್ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಕಮಲ-ದಳ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲೇಶ್ (ಜೆಡಿಎಸ್) ಅವರಿಗೆ ಸಂಸದ ಮತ್ತು ಶಾಸಕ ಇಬ್ಬರ ಮತ ಸೇರಿ 23 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಆನಂದ್ ಅವರಿಗೆ 10 ಮತಗಳು ದೊರೆತಿದ್ದು, 23 ಮತಗಳನ್ನು ಪಡೆದ ಮಲ್ಲೇಶ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ವಿಪ್ ಜಾರಿ
ಚುನಾವಣೆ ಹಿನ್ನಲೆಯಲ್ಲಿ ಮೂರು ಪಕ್ಷಗಳಿಂದ ವಿಪ್ ಜಾರಿ ಮಾಡಲಾಗಿತ್ತು. ಈ ಪೈಕಿ ಇಬ್ಬರು ಸದಸ್ಯರು ವಿಪ್ ಉಲ್ಲಂಘನೆ ಮಾಡಿ ಮತದಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರ್ಪಡೆಯಾಗಿದ್ದ ಎಂ.ಜಿ ಶ್ರೀನಿವಾಸ್ ಹಾಗೂ ಜೆಡಿಎಸ್ ನ ಹಸೀನತಾಜ್ ವಿಪ್ ಉಲ್ಲಂಘನೆ ಮಾಡಿದ್ದಾರೆ. ಇತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಶಿವಶಂಕರ್ ಹಾಗೂ ಶಿವಣ್ಣ ವಿಪ್ಗೆ ಮನ್ನಣೆ ಮಾಡಿ ಬಿಜೆಪಿ ಅಭ್ಯರ್ಥಿಗೆ ಮತನೀಡಿದ್ದಾರೆ.
ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸಂಸದ ಡಾ.ಕೆ.ಸುಧಾಕರ್ ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಲಭಿಸಿರುವುದು ಸಂತಸದ ವಿಷಯ. ಮತ್ತೆ ನಮ್ಮ ಹಿರಿಮೆ ಗರಿಮೆ ಹೆಚ್ಚಾಗಿದೆ. ಜವಾಬ್ದಾರಿ ಮತ್ತಷ್ಟು ವೃದ್ಧಿಸಿದೆ. ನಗರದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ತಂದುಕೊಡುವಲ್ಲಿ ಶ್ರಮಿಸುತ್ತೇನೆ. ದೊಡ್ಡಬಳ್ಳಾಪುರ ನಗರವನ್ನು ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಉಪಗ್ರಹ ನಗರವನ್ನಾಗಿ ಮಾಡಬೇಕು. ಸುರಕ್ಷಿತ, ಸುಂದರ ನಗರವನ್ನಾಗಿ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ನಂತರ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಬಿಜೆಪಿಯ 12 ಮಂದಿ ಸದಸ್ಯರು, ಜೆಡಿಎಸ್ ನ 6ಮಂದಿ ಸದಸ್ಯರು, ಮೂರು ಮಂದಿ ಪಕ್ಷೇತರರ ಸಹಕಾರದಿಂದ ಇಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ನಗರಸಭೆ ಚುಕ್ಕಾಣಿ ಹಿಡಿದಿದ್ದಾರೆ.
ಇಂದು ಬಿಜೆಪಿಗೆ ಒಳ್ಳೆಯ ದಿನ. ಡಾ.ಕೆ.ಸುಧಾಕರ್ ಅವರು ಸಂಸದರಾದ ಮೇಲೆ ತಾಲೂಕಿನಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳುತ್ತಿದೆ. ಅವರು ಕಾಲಿಟ್ಟ ಕಡೆ ಸಿಹಿಸುದ್ಧಿ ಕೇಳುತ್ತಿದ್ದೇವೆ ಎಂದು ಹೇಳಿದರು.
ಬಿಜೆಪಿ ಎಲ್ಲಾ ಮುಖಂಡರು, ನಗರಸಭೆ ಸದಸ್ಯರು, ಮೈತ್ರಿಕೂಟದ ಮುಖಂಡರ ಸಹಕಾರದಿಂದ ಇಂದು ನಾನು ನಗರಸಭೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ. ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ನಗರವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡುತ್ತೇನೆ ಎಂದು ನಗರಸಭೆ ನೂತನ ಅಧ್ಯಕ್ಷೆ ಸುಮಿತ್ರ ಆನಂದ್ ಹೇಳಿದರು.
ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ವೆಂಕಟೇಶ್ ಸೇರಿದಂತೆ ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಯಕರ್ತರು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಅಭಿನಂದಿಸಿದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…