ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು, ನಾನು 7 ವರ್ಷಗಳ ಕಾಲ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದೆ. ನಾನು ಎಂದೂ ಇವರ ಮೂಖ ನೋಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಎಂದೂ ಇವರು ಗುರುತಿಸಿಕೊಂಡಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇವರಿಗೂ ಯಾವುದೇ ಸಂಬಂಧವಿಲ್ಲ. ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಶ್ರೀ ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ ತಿಳಿಸಿದರು.
ತೂಬಗೆರೆ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಪ್ರಮೇಯವೇ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ಹೇಳಿದ್ದಾರೆ.
ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಅಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಹೆಸರನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಜೆಡಿಎಸ್ ನ ಹುನ್ನಾರ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್ ಹೇಳಿದರು.