ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು, ನಾನು 7 ವರ್ಷಗಳ ಕಾಲ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದೆ. ನಾನು ಎಂದೂ ಇವರ ಮೂಖ ನೋಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಎಂದೂ ಇವರು ಗುರುತಿಸಿಕೊಂಡಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇವರಿಗೂ ಯಾವುದೇ ಸಂಬಂಧವಿಲ್ಲ. ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಶ್ರೀ ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ ತಿಳಿಸಿದರು.
ತೂಬಗೆರೆ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಪ್ರಮೇಯವೇ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ಹೇಳಿದ್ದಾರೆ.
ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಅಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಹೆಸರನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಜೆಡಿಎಸ್ ನ ಹುನ್ನಾರ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್ ಹೇಳಿದರು.
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…