ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು, ನಾನು 7 ವರ್ಷಗಳ ಕಾಲ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದೆ. ನಾನು ಎಂದೂ ಇವರ ಮೂಖ ನೋಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಎಂದೂ ಇವರು ಗುರುತಿಸಿಕೊಂಡಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇವರಿಗೂ ಯಾವುದೇ ಸಂಬಂಧವಿಲ್ಲ. ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಶ್ರೀ ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ ತಿಳಿಸಿದರು.
ತೂಬಗೆರೆ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಪ್ರಮೇಯವೇ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ಹೇಳಿದ್ದಾರೆ.
ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಅಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಹೆಸರನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಜೆಡಿಎಸ್ ನ ಹುನ್ನಾರ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್ ಹೇಳಿದರು.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…