ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು, ನಾನು 7 ವರ್ಷಗಳ ಕಾಲ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದೆ. ನಾನು ಎಂದೂ ಇವರ ಮೂಖ ನೋಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಎಂದೂ ಇವರು ಗುರುತಿಸಿಕೊಂಡಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇವರಿಗೂ ಯಾವುದೇ ಸಂಬಂಧವಿಲ್ಲ. ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಶ್ರೀ ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ ತಿಳಿಸಿದರು.
ತೂಬಗೆರೆ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಪ್ರಮೇಯವೇ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ಹೇಳಿದ್ದಾರೆ.
ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಅಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಹೆಸರನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಜೆಡಿಎಸ್ ನ ಹುನ್ನಾರ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್ ಹೇಳಿದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…