Categories: ಕೋಲಾರ

ಕಾಂಗ್ರೆಸ್ ದುರಾಡಳಿತವೇ ಜೆಡಿಎಸ್‌-ಬಿಜೆಪಿ ಮೈತ್ರಿಕೂಟ ಗೆಲುವಿಗೆ ಸಹಕಾರಿ: ಇಂಚರ ಗೋವಿಂದರಾಜು

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಜನರಿಗೆ ತಿಳಿಯುವಂತೆ ಮಾಡುವ ಜೊತೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕಾಗಿದೆ ಇಂತಹ ಒಳ್ಳೆಯ ಅವಕಾಶವನ್ನು ಪಕ್ಷದ ಕಾರ್ಯಕರ್ತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ತಿಳಿಸಿದರು.

ತಾಲೂಕಿನ ಲಕ್ಷ್ಮೀಸಾಗರದ ತಮ್ಮ ತೋಟದಲ್ಲಿ ಭಾನುವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನರಸಾಪುರ ಹೋಬಳಿ ಮಟ್ಟದ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವು ಬಲಿಷ್ಠವಾಗಿದೆ ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ ಅಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿ ನಾಯಕರಾಗಿ ಗುರುತಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಾಯಕತ್ವದಲ್ಲಿ ಈ ಬಾರಿಯೂ ಎನ್.ಡಿ.ಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಪಕ್ಷಗಳ ಕಾರ್ಯಕರ್ತರು ದೇಶದ ಭವಿಷ್ಯದ ದೃಷ್ಟಿಯಿಂದ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಬೇಕು ಜನರಿಗೆ ನ್ಯಾಯ ಕೊಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಯಾವುದೇ ವಿಚಾರದಲ್ಲಿ ಆಗಲಿ ನಾವು ಕಾರ್ಯಕರ್ತರ ಯೋಗಕ್ಷೇಮದಲ್ಲಿ ನಿಮ್ಮೊಂದಿಗೆ ಇರುತ್ತೇವೆ ಒಟ್ಟಾಗಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡೋಣ ಮುಂದಿನ ದಿನಗಳಲ್ಲಿ ಎಲ್ಲರಿಗೂ ಒಳ್ಳೆಯದು ಆಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಲೋಕಸಭಾ ಚುನಾವಣೆ ಇನ್ನೂ ಕೆಲವೇ ದಿನಗಳಲ್ಲಿ ಬರುತ್ತದೆ ಯಾರೇ ಅಭ್ಯರ್ಥಿಯಾಗಲಿ ಗೆಲುವು ಮಾತ್ರ ಮೈತ್ರಿಕೂಟಕ್ಕೆ ಎಂಬ ರೀತಿಯಲ್ಲಿ ಕೆಲಸ ಮಾಡೋಣ ಹಿಂದೆ ಸಾಕಷ್ಟು ತಪ್ಪುಗಳು ಆಗಿರಬಹುದು ಅವುಗಳನ್ನು ಮರೆತು ಒಗ್ಗಟ್ಟಿನಿಂದ ಒಮ್ಮತದಿಂದ ಚುನಾವಣೆಯನ್ನು ಎದುರಿಸೋಣ ಕಾಂಗ್ರೆಸ್ ಬಿಟ್ಟಿ ಗ್ಯಾರಂಟಿಗಳಿಗೆ ಚುನಾವಣೆ ಮುಗಿದ ನಂತರ ವಾರಂಟಿ ಇಲ್ಲ ಅದರಿಂದಾಗಿ ಭವ್ಯ ಭಾರತ ನಿರ್ಮಾಣ ಮಾತ್ರ ಎನ್.ಡಿ.ಎ ಮೈತ್ರಿ ಕೂಟದಿಂದ ಮಾತ್ರ ಸಾಧ್ಯವಾಗುತ್ತದೆ ಎಂಬುದು ಜನಕ್ಕೆ ತಿಳಿಸೋಣ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ ಜಿಲ್ಲೆಯಲ್ಲಿ ನಾಲ್ಕು ಜನ ಶಾಸಕರು ಇದ್ದಾರೆ ಆದರೆ ಜಿಲ್ಲೆಗೆ ಯಾವುದೇ ಗುರುತರವಾದ ಬಜೆಟ್ ತರಲು ಸಾಧ್ಯವಾಗಲಿಲ್ಲ ಸಿದ್ದರಾಮಯ್ಯ ಕೋಲಾರಕ್ಕೆ ಬರುವ ನೆಪದಲ್ಲಿ ತೇರಹಳ್ಳಿ ಬೆಟ್ಟಕ್ಕೆ ರಸ್ತೆ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಮಾಡಲಿಲ್ಲ ಇವತ್ತು ವಾರ್ಡ್ ಗಳ ಎಲ್ಲವೂ ಸ್ಲಂಗಳಾಗಿವೆ ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳ ಮಧ್ಯೆ ಸಮನ್ವಯತೆ ಕೊರತೆಯಿಲ್ಲದೇ ಅಭಿವೃದ್ಧಿ ಶೂನ್ಯವಾಗಿದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಜನ ಕಲಿಸಲಿದ್ದಾರೆ ಎಂದ ಅವರು ಇದೇ ರೀತಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮಗಳಲ್ಲಿ ಸಭೆಗಳನ್ನು ಮಾಡಿ ಮೈತ್ರಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಮಾತನಾಡಿ ಜಿಲ್ಲೆಯಲ್ಲಿ ಜೆಡಿಎಸ್‌-ಬಿಜೆಪಿ ಪಕ್ಷಗಳ ಮಧ್ಯೆಯೇ ನೇರ ಹಣಾಹಣೆ ಇದ್ದು ಕೇವಲ ನಾಯಕರು ಅಷ್ಟೇ ಸಮನ್ವಯತೆ ಸಾಧಿಸಿದರೆ ಸಾಲದು ಗ್ರಾಮಗಳಲ್ಲಿನ ಎರಡು ಪಕ್ಷದ ಮುಖಂಡರ ಮಧ್ಯೆ ಸಮನ್ವಯತೆ ಸಾಧಿಸುವಂತೆ ಸಭೆಗಳನ್ನು ಮಾಡಬೇಕು ಕಾಂಗ್ರೆಸ್ ಸರಕಾರದಲ್ಲಿನ ಅಧಿಕಾರಿಗಳು ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಾರೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಜೊತೆಗೆ ಪಕ್ಷದ ಸಂಘಟನೆ ಬಗ್ಗೆ ಕಾರ್ಯಕರ್ತರೊಂದಿಗೆ ನಾಯಕರು ಕೈ ಜೋಡಿಸಬೇಕು ಯುವಕರಿಗೆ ಪಕ್ಷದಲ್ಲಿ ಜವಾಬ್ದಾರಿ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಬಾಬು ಮೌನಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ವಕೀಲರ ಸಂಘದ ಅಧ್ಯಕ್ಷ ಬೆಗ್ಲಿ ಮುನೇಗೌಡ, ಜೆಡಿಎಸ್‌ ಎಸ್ಸಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಉಪಾಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಖಾಜಿಕಲ್ಲಹಳ್ಳಿ ಹರೀಷ್ ಗೌಡ, ತಿರುಮಲೇಶ್, ಕಡಗಟ್ಟೂರು ವಿಜಯಕುಮಾರ್, ಬೆಳಮಾರನಹಳ್ಳಿ ಚಂದ್ರು, ತ್ಯಾಗರಾಜ್, ಲೋಕೇಶ್ ಮರಿಯಪ್ಪ, ತೋಟಗಳ ಅಶೋಕ್, ಯಲ್ಲಮ್ಮ, ಉದ್ದಪ್ಪನಹಳ್ಳಿ ಶೇಖರ್, ದೇವರಾಜ್, ಮಸಾಲೆ ಅಂಜಿನಪ್ಪ, ಸುದರ್ಶನ್, ಮೋಹನ್ ಮುಂತಾದವರು ಇದ್ದರು

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

9 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

11 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

11 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

19 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

21 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

23 hours ago