Categories: ಕೋಲಾರ

ಕಾಂಗ್ರೆಸ್ ದುರಾಡಳಿತವೇ ಜೆಡಿಎಸ್‌-ಬಿಜೆಪಿ ಮೈತ್ರಿಕೂಟ ಗೆಲುವಿಗೆ ಸಹಕಾರಿ: ಇಂಚರ ಗೋವಿಂದರಾಜು

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಜನರಿಗೆ ತಿಳಿಯುವಂತೆ ಮಾಡುವ ಜೊತೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕಾಗಿದೆ ಇಂತಹ ಒಳ್ಳೆಯ ಅವಕಾಶವನ್ನು ಪಕ್ಷದ ಕಾರ್ಯಕರ್ತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ತಿಳಿಸಿದರು.

ತಾಲೂಕಿನ ಲಕ್ಷ್ಮೀಸಾಗರದ ತಮ್ಮ ತೋಟದಲ್ಲಿ ಭಾನುವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನರಸಾಪುರ ಹೋಬಳಿ ಮಟ್ಟದ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವು ಬಲಿಷ್ಠವಾಗಿದೆ ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ ಅಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿ ನಾಯಕರಾಗಿ ಗುರುತಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಾಯಕತ್ವದಲ್ಲಿ ಈ ಬಾರಿಯೂ ಎನ್.ಡಿ.ಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಪಕ್ಷಗಳ ಕಾರ್ಯಕರ್ತರು ದೇಶದ ಭವಿಷ್ಯದ ದೃಷ್ಟಿಯಿಂದ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಬೇಕು ಜನರಿಗೆ ನ್ಯಾಯ ಕೊಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಯಾವುದೇ ವಿಚಾರದಲ್ಲಿ ಆಗಲಿ ನಾವು ಕಾರ್ಯಕರ್ತರ ಯೋಗಕ್ಷೇಮದಲ್ಲಿ ನಿಮ್ಮೊಂದಿಗೆ ಇರುತ್ತೇವೆ ಒಟ್ಟಾಗಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡೋಣ ಮುಂದಿನ ದಿನಗಳಲ್ಲಿ ಎಲ್ಲರಿಗೂ ಒಳ್ಳೆಯದು ಆಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಲೋಕಸಭಾ ಚುನಾವಣೆ ಇನ್ನೂ ಕೆಲವೇ ದಿನಗಳಲ್ಲಿ ಬರುತ್ತದೆ ಯಾರೇ ಅಭ್ಯರ್ಥಿಯಾಗಲಿ ಗೆಲುವು ಮಾತ್ರ ಮೈತ್ರಿಕೂಟಕ್ಕೆ ಎಂಬ ರೀತಿಯಲ್ಲಿ ಕೆಲಸ ಮಾಡೋಣ ಹಿಂದೆ ಸಾಕಷ್ಟು ತಪ್ಪುಗಳು ಆಗಿರಬಹುದು ಅವುಗಳನ್ನು ಮರೆತು ಒಗ್ಗಟ್ಟಿನಿಂದ ಒಮ್ಮತದಿಂದ ಚುನಾವಣೆಯನ್ನು ಎದುರಿಸೋಣ ಕಾಂಗ್ರೆಸ್ ಬಿಟ್ಟಿ ಗ್ಯಾರಂಟಿಗಳಿಗೆ ಚುನಾವಣೆ ಮುಗಿದ ನಂತರ ವಾರಂಟಿ ಇಲ್ಲ ಅದರಿಂದಾಗಿ ಭವ್ಯ ಭಾರತ ನಿರ್ಮಾಣ ಮಾತ್ರ ಎನ್.ಡಿ.ಎ ಮೈತ್ರಿ ಕೂಟದಿಂದ ಮಾತ್ರ ಸಾಧ್ಯವಾಗುತ್ತದೆ ಎಂಬುದು ಜನಕ್ಕೆ ತಿಳಿಸೋಣ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ ಜಿಲ್ಲೆಯಲ್ಲಿ ನಾಲ್ಕು ಜನ ಶಾಸಕರು ಇದ್ದಾರೆ ಆದರೆ ಜಿಲ್ಲೆಗೆ ಯಾವುದೇ ಗುರುತರವಾದ ಬಜೆಟ್ ತರಲು ಸಾಧ್ಯವಾಗಲಿಲ್ಲ ಸಿದ್ದರಾಮಯ್ಯ ಕೋಲಾರಕ್ಕೆ ಬರುವ ನೆಪದಲ್ಲಿ ತೇರಹಳ್ಳಿ ಬೆಟ್ಟಕ್ಕೆ ರಸ್ತೆ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಮಾಡಲಿಲ್ಲ ಇವತ್ತು ವಾರ್ಡ್ ಗಳ ಎಲ್ಲವೂ ಸ್ಲಂಗಳಾಗಿವೆ ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳ ಮಧ್ಯೆ ಸಮನ್ವಯತೆ ಕೊರತೆಯಿಲ್ಲದೇ ಅಭಿವೃದ್ಧಿ ಶೂನ್ಯವಾಗಿದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಜನ ಕಲಿಸಲಿದ್ದಾರೆ ಎಂದ ಅವರು ಇದೇ ರೀತಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮಗಳಲ್ಲಿ ಸಭೆಗಳನ್ನು ಮಾಡಿ ಮೈತ್ರಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಮಾತನಾಡಿ ಜಿಲ್ಲೆಯಲ್ಲಿ ಜೆಡಿಎಸ್‌-ಬಿಜೆಪಿ ಪಕ್ಷಗಳ ಮಧ್ಯೆಯೇ ನೇರ ಹಣಾಹಣೆ ಇದ್ದು ಕೇವಲ ನಾಯಕರು ಅಷ್ಟೇ ಸಮನ್ವಯತೆ ಸಾಧಿಸಿದರೆ ಸಾಲದು ಗ್ರಾಮಗಳಲ್ಲಿನ ಎರಡು ಪಕ್ಷದ ಮುಖಂಡರ ಮಧ್ಯೆ ಸಮನ್ವಯತೆ ಸಾಧಿಸುವಂತೆ ಸಭೆಗಳನ್ನು ಮಾಡಬೇಕು ಕಾಂಗ್ರೆಸ್ ಸರಕಾರದಲ್ಲಿನ ಅಧಿಕಾರಿಗಳು ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಾರೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಜೊತೆಗೆ ಪಕ್ಷದ ಸಂಘಟನೆ ಬಗ್ಗೆ ಕಾರ್ಯಕರ್ತರೊಂದಿಗೆ ನಾಯಕರು ಕೈ ಜೋಡಿಸಬೇಕು ಯುವಕರಿಗೆ ಪಕ್ಷದಲ್ಲಿ ಜವಾಬ್ದಾರಿ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಬಾಬು ಮೌನಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ವಕೀಲರ ಸಂಘದ ಅಧ್ಯಕ್ಷ ಬೆಗ್ಲಿ ಮುನೇಗೌಡ, ಜೆಡಿಎಸ್‌ ಎಸ್ಸಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಉಪಾಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಖಾಜಿಕಲ್ಲಹಳ್ಳಿ ಹರೀಷ್ ಗೌಡ, ತಿರುಮಲೇಶ್, ಕಡಗಟ್ಟೂರು ವಿಜಯಕುಮಾರ್, ಬೆಳಮಾರನಹಳ್ಳಿ ಚಂದ್ರು, ತ್ಯಾಗರಾಜ್, ಲೋಕೇಶ್ ಮರಿಯಪ್ಪ, ತೋಟಗಳ ಅಶೋಕ್, ಯಲ್ಲಮ್ಮ, ಉದ್ದಪ್ಪನಹಳ್ಳಿ ಶೇಖರ್, ದೇವರಾಜ್, ಮಸಾಲೆ ಅಂಜಿನಪ್ಪ, ಸುದರ್ಶನ್, ಮೋಹನ್ ಮುಂತಾದವರು ಇದ್ದರು

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

14 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

19 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago