ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ ಹಿರಿಯ ಸಚಿವ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಚುನಾವಣಾ ಆಯೋಗದ ವಿರುದ್ಧ ಬಾಲಿಶತನದ ಆರೋಪ ಮಾಡುವ ಮೂಲಕ ನಗೆ ಪಾಟಲಿಗೀಡಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದ್ಯ ಹತಾಶ ಮನಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ‘ಇದ್ದಿದ್ದು ಇದ್ದಂಗೆ ಹೇಳಿ’ ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ ಹಿರಿಯ ಸಚಿವ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ. ಮುಖ್ಯಮಂತ್ರಿಗಳ ಬಲಗೈ ಭಂಟರಾಗಿ ಕಾಂಗ್ರೆಸ್ ಪಕ್ಷದ ವೈಫಲ್ಯಗಳು ಹಾಗೂ ಆಂತರಿಕ ದಬ್ಬಾಳಿಕೆಗಳನ್ನು ನಿಷ್ಟೂರವಾಗಿ ಬಿಚ್ಚಿಡುತ್ತಿದ್ದ ರಾಜಣ್ಣ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

‘ಕೈ’ ವರಿಷ್ಠ ನೇತಾರ ರಾಹುಲ್ ಗಾಂಧಿಯವರ ಎಡಬಿಡಂಗಿ ನಡೆಯನ್ನು ಎತ್ತಿ ತೋರಿಸಿದ ಪರಿಶಿಷ್ಟ ಪಂಗಡ ಹಾಗೂ ಶೋಷಿತ ಸಮುದಾಯಗಳ ಪರವಾಗಿ ದನಿಯಾಗಿದ್ದ ಕೆ.ಎನ್ ರಾಜಣ್ಣ K N Rajanna ನವರು ಸಚಿವ ಪದವಿಯಿಂದ ಉಚ್ಚಾಟಿತಗೊಂಡಿರುವುದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸಂಸ್ಕೃತಿ ಇನ್ನೂ ತೊಲಗಿಲ್ಲ, ಪರಿಶಿಷ್ಟ ಸಮುದಾಯದ ನಾಯಕರ ನಾಯಕತ್ವವನ್ನು ದಮನ ಮಾಡುವ ದಬ್ಬಾಳಿಕೆ ಇನ್ನೂ ನಿಂತಿಲ್ಲ ಎನ್ನುವುದನ್ನು ಸಾಕ್ಷೀಕರಿಸಿದೆ ಎಂದು ಹೇಳಿದರು.

ಮತಗಳ್ಳತನದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರ ಅಪ್ರಬುದ್ಧ ನಡೆಯನ್ನು ವಿಶ್ಲೇಷಿಸಿ ಕಾಂಗ್ರೆಸ್ ಪಕ್ಷದ್ದೇ ತಪ್ಪು, “2024 ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು, ಲೋಕಸಭಾ ಚುನಾವಣೆಗೂ ಮುಂಚೆಯೇ ಮತದಾರರ ಪಟ್ಟಿಯನ್ನು ಪರಿಶೀಲಿಸುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿಯಾಗಿತ್ತು, ಚುನಾವಣಾ ಸಂದರ್ಭದಲ್ಲಿ ಬೂತ್ ಕಾರ್ಯಕರ್ತರು ಇದನ್ನು ಗಮನಿಸುವಂತೆ ಪಕ್ಷ ನೋಡಿಕೊಳ್ಳಬೇಕಿತ್ತು, ಮತದಾನದಂದು ಕಾಂಗ್ರೆಸ್ ಪಕ್ಷದ ಏಜೆಂಟರುಗಳು ಲೋಪಗಳಿದ್ದರೆ ಗಮನಿಸುವಂತೆ ತರಬೇತಿ ನೀಡಬೇಕಾಗಿತ್ತು, ಚುನಾವಣೆಯ ನಂತರವೂ ದೂರು ಸಲ್ಲಿಸಬೇಕಾಗಿತ್ತು, ಇದ್ಯಾವುದನ್ನೂ ಮಾಡದೆ ಏಕಾಏಕಿ ಈಗ ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸಲು ಹೊರಟಿರುವ ಕ್ರಮ ಸರಿಯಲ್ಲ” ಎಂದು ರಾಜಣ್ಣ ಹೇಳಿದ್ದರು. ಇದನ್ನೇ ನಾಡಿನ ಪ್ರಮುಖ ಪತ್ರಿಕೆಗಳು ತಮ್ಮ ಸಂಪಾದಕೀಯದಲ್ಲೂ ಉಲ್ಲೇಖಿಸಿವೆ ಎಂದರು.

ಕಾಂಗ್ರೆಸ್ ಪಕ್ಷದ ಬೇಜವಾಬ್ದಾರಿತನ, ಕ್ಷುಲ್ಲಕ ರಾಜಕೀಯ ನಡೆ, ಪ್ರಧಾನಿ ನರೇಂದ್ರ ಮೋದಿ Narendra Modi ಅವರನ್ನು ವಿರೋಧಿಸುವುದಕ್ಕಾಗಿ ವಿತಂಡ ವಿರೋಧ ಮಾಡುವುದು, ಇದಕ್ಕಾಗಿ ಸಾಂವಿಧಾನಿಕ ಸಂಸ್ಥೆಗಳ ಮೇಲೂ ಆರೋಪ ಹೊರಿಸುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ Indian National Congress ಇತ್ತೀಚಿನ ನಡವಳಿಕೆಯಾಗಿದೆ. ಇದನ್ನು ಪ್ರಶ್ನಿಸುವ ಕಾಂಗ್ರೆಸ್ ಪಕ್ಷದ ಕಾಳಜಿಯ ನಾಯಕರುಗಳನ್ನು ಮೂಲೆಗೆ ಸೇರಿಸುವ ತುಘಲಕ್ ದರ್ಬಾರ್ ಆರಂಭವಾಗಿದೆ, ಇದಕ್ಕೆ ಕೆ.ಎನ್.ರಾಜಣ್ಣನವರ ಮೂಲಕ ಮೊದಲ ವಿಕೆಟ್ ಪತನವಾಗಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೂ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂದು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah ಅವರು ಕೇವಲ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ, ಎನ್ನುವುದು ಇತ್ತೀಚಿನ ಕರ್ನಾಟಕ ಸರ್ಕಾರದ ನಿರ್ಧಾರಗಳನ್ನು ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ಪ್ರಕಟಿಸುತ್ತಿರುವುದು ಸ್ಪಷ್ಟವಾಗಿದೆ. ರಾಜಣ್ಣನವರು ಈ ಹಿಂದೆ ಹೇಳಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಸೆಪ್ಟಂಬರ್ ಕ್ರಾಂತಿ ಮುಂಚಿತವಾಗಿಯೇ ಆರಂಭವಾಗಿದೆ, ಕ್ರಾಂತಿಯ ಕಿಡಿ ಯಾರನ್ನಾದರೂ ಬಲಿತೆಗೆದು ಕೊಳ್ಳಲಿ ಆದರೆ ಸದ್ಯ ಈಗಾಗಲೇ ಸೊರಗಿರುವ ಕರ್ನಾಟಕವನ್ನು ಸುಡದಿರಲಿ ಎಂದರು.

ಸ್ವಾರ್ಥದ ಅಟ್ಟಹಾಸ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಸರಣೀ ಹಗರಣಗಳನ್ನು ಕತ್ತಿಗೆ ಸುತ್ತಿಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಜನರ ಹಿತವನ್ನು ಮರೆತು ಪಕ್ಷ ಹಾಗೂ ಅಧಿಕಾರದ ಸುತ್ತ ಗಮನವನ್ನು ಕೇಂದ್ರೀಕರಿಸಿ ರಾಜ್ಯ ಹಾಗೂ ರಾಜ್ಯದ ಜನರ ಹಿತಾಸಕ್ತಿಯನ್ನು ಸಂಪೂರ್ಣ ಮರೆತಿದೆ. ಕಾಂಗ್ರೆಸ್ Indian National Congress – Karnataka ಅಧಿಕಾರಕ್ಕೆ ತಂದ ಕಾರಣಕ್ಕಾಗಿ ಜನ ಶಪಿಸುತ್ತಿದ್ದಾರೆ ಇದರ ನಡುವೆ ದಮನಿತ ಸಮುದಾಯದ ನಾಯಕರನ್ನೂ ರಾಜಕೀಯವಾಗಿ ಮುಗಿಸುವ ಷಡ್ಯಂತ್ರದಿಂದ ಕಾಂಗ್ರೆಸ್ ಪಕ್ಷದ ಅಸಲಿ ಮುಖವಾಡವನ್ನು ಜನ ಮತ್ತೊಮ್ಮೆ ತಿಳಿಯುವಂತಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 hour ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 hour ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

4 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

6 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

18 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

18 hours ago