Categories: ಕೋಲಾರ

ಕಾಂಗ್ರೆಸ್ ನಿಂದ ರಾಜ್ಯದ ಜನತೆಯನ್ನು ಯಾಮಾರಿಸಿದ ಹಾಸನದ ಸ್ವಾಭಿಮಾನ ಸಮಾವೇಶ- ಬಣಕನಹಳ್ಳಿ ನಟರಾಜ್ ವ್ಯಂಗ್ಯ

ಕೋಲಾರ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಾಸನದಲ್ಲಿ ನಡೆದ ಸ್ವಾಭಿಮಾನ ಸಮಾವೇಶವು ರಾಜ್ಯದ ಜನತೆಯನ್ನು ಯಾಮಾರಿಸಿದ ಸಮಾವೇಶವಾಗಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಮಾವೇಶ ನಡೆಸುವ ನೈತಿಕತೆ ಇಲ್ಲ ಎಂದು ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ವ್ಯಂಗ್ಯ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯದ ಅಭಿವೃದ್ಧಿಗೆ ಸುಮಾರು 56 ಸಾವಿರ ಕೋಟಿ ಅನುದಾನ ಬಿಡುಗಡೆ ಎಂದು ಪ್ರಚಾರ ಮಾಡಿದಿದ್ದಾರೆ. ಪ್ರತಿ ಕ್ಷೇತ್ರಕ್ಕೆ ಎಷ್ಟು ಕೊಟ್ಟಿದ್ದಾರೆ ಕ್ಷೇತ್ರದ ಶಾಸಕರು ಬಹಿರಂಗ ಪಡಿಸಲಿ. ಸ್ವಾಭಿಮಾನ ಸಮಾವೇಶವು ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಸರ್ಕಾರದಲ್ಲಿ ಹಣ ಇಲ್ಲ ಎಂದು ಸ್ವಪಕ್ಷದ ಶಾಸಕರೇ ಹೇಳಿಕೊಂಡಿದ್ದಾರೆ ಜನರನ್ನು ಯಾಮಾರಿಸಬೇಡಿ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮುಸ್ಲಿಂ ಸಮುದಾಯವೇ ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅದರಲ್ಲೂ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಬೇರೆಯವರಿಗೆ ಮತ ಹಾಕಲ್ಲ ಅಂತಹದರಲ್ಲಿ ಮುಸ್ಲಿಂ ಸಮುದಾಯವು ಯಾಕೆ ಮುಖ್ಯಮಂತ್ರಿ ಸ್ಥಾನವನ್ನು ಕೇಳಬಾರದು? ಮುಸ್ಲಿಮ್ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟು ರಾಷ್ಟ್ರಕ್ಕೆ ಸಂದೇಶವನ್ನು ನೀಡಲಿ. ಕಾಂಗ್ರೆಸ್ ಪಕ್ಷದಲ್ಲಿ ಕೆ.ಹೆಚ್ ಮುನಿಯಪ್ಪ ಅಂತಹ ಹಿರಿಯರು, ನಿಷ್ಠಾವಂತರು ಇದ್ದು ಅಂತವರಿಗೆ ಸಿಎಂ ಸ್ಥಾನ ಕೊಡಲು ಸಮುದಾಯಗಳು ಪ್ರಶ್ನೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹಾಸನ ಸಮಾವೇಶನಕ್ಕೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತೊಂದರೆ ಕೊಡಲಿಲ್ಲ, ಮಂಡ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭಕ್ಕೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೆ ಮೆಣಸಿನಕಾಯಿ ಇಟ್ಟುಕೊಂಡತೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸ್ವಾಭಿಮಾನ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ರಾಜಕೀಯ ಗುರು ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಉದ್ದುದ್ದವಾಗಿ ಭಾಷಣ ಮಾಡಿದ್ದಾರೆ ಸಿದ್ದರಾಮಯ್ಯ ಜೊತೆಗೆ ಇದ್ದ ಹಿರಿಯರನ್ನು ಏನು ಮಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಸಚಿವ ಸಂಪುಟದ ಸಚಿವರು ಸಿದ್ದರಾಮಯ್ಯ ಮೇಲಿನ ಆರೋಪಕ್ಕೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. ಇಡಿ ಇಲಾಖೆ ಸೇರಿದಂತೆ ಕೋರ್ಟ್ ಅದೇಶಕ್ಕೆ ತಲೆ ಬಾಗಬೇಕು. ಸಿದ್ದರಾಮಯ್ಯ ಅವರು ಅಧಿಕಾರಕಾದ ದುರಾಸೆಯಿಂದ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳನ್ನು ಮುಚ್ಚಿಟ್ಟುಕೊಳ್ಳಲು ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಹೇಳಿದ್ದಾರೆ.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

7 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

10 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

15 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

16 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

16 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

18 hours ago