Categories: ಕೋಲಾರ

ಕಾಂಗ್ರೆಸ್ ನಿಂದ ರಾಜ್ಯದ ಜನತೆಯನ್ನು ಯಾಮಾರಿಸಿದ ಹಾಸನದ ಸ್ವಾಭಿಮಾನ ಸಮಾವೇಶ- ಬಣಕನಹಳ್ಳಿ ನಟರಾಜ್ ವ್ಯಂಗ್ಯ

ಕೋಲಾರ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಾಸನದಲ್ಲಿ ನಡೆದ ಸ್ವಾಭಿಮಾನ ಸಮಾವೇಶವು ರಾಜ್ಯದ ಜನತೆಯನ್ನು ಯಾಮಾರಿಸಿದ ಸಮಾವೇಶವಾಗಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಮಾವೇಶ ನಡೆಸುವ ನೈತಿಕತೆ ಇಲ್ಲ ಎಂದು ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ವ್ಯಂಗ್ಯ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯದ ಅಭಿವೃದ್ಧಿಗೆ ಸುಮಾರು 56 ಸಾವಿರ ಕೋಟಿ ಅನುದಾನ ಬಿಡುಗಡೆ ಎಂದು ಪ್ರಚಾರ ಮಾಡಿದಿದ್ದಾರೆ. ಪ್ರತಿ ಕ್ಷೇತ್ರಕ್ಕೆ ಎಷ್ಟು ಕೊಟ್ಟಿದ್ದಾರೆ ಕ್ಷೇತ್ರದ ಶಾಸಕರು ಬಹಿರಂಗ ಪಡಿಸಲಿ. ಸ್ವಾಭಿಮಾನ ಸಮಾವೇಶವು ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಸರ್ಕಾರದಲ್ಲಿ ಹಣ ಇಲ್ಲ ಎಂದು ಸ್ವಪಕ್ಷದ ಶಾಸಕರೇ ಹೇಳಿಕೊಂಡಿದ್ದಾರೆ ಜನರನ್ನು ಯಾಮಾರಿಸಬೇಡಿ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮುಸ್ಲಿಂ ಸಮುದಾಯವೇ ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅದರಲ್ಲೂ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಬೇರೆಯವರಿಗೆ ಮತ ಹಾಕಲ್ಲ ಅಂತಹದರಲ್ಲಿ ಮುಸ್ಲಿಂ ಸಮುದಾಯವು ಯಾಕೆ ಮುಖ್ಯಮಂತ್ರಿ ಸ್ಥಾನವನ್ನು ಕೇಳಬಾರದು? ಮುಸ್ಲಿಮ್ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟು ರಾಷ್ಟ್ರಕ್ಕೆ ಸಂದೇಶವನ್ನು ನೀಡಲಿ. ಕಾಂಗ್ರೆಸ್ ಪಕ್ಷದಲ್ಲಿ ಕೆ.ಹೆಚ್ ಮುನಿಯಪ್ಪ ಅಂತಹ ಹಿರಿಯರು, ನಿಷ್ಠಾವಂತರು ಇದ್ದು ಅಂತವರಿಗೆ ಸಿಎಂ ಸ್ಥಾನ ಕೊಡಲು ಸಮುದಾಯಗಳು ಪ್ರಶ್ನೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹಾಸನ ಸಮಾವೇಶನಕ್ಕೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತೊಂದರೆ ಕೊಡಲಿಲ್ಲ, ಮಂಡ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭಕ್ಕೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೆ ಮೆಣಸಿನಕಾಯಿ ಇಟ್ಟುಕೊಂಡತೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸ್ವಾಭಿಮಾನ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ರಾಜಕೀಯ ಗುರು ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಉದ್ದುದ್ದವಾಗಿ ಭಾಷಣ ಮಾಡಿದ್ದಾರೆ ಸಿದ್ದರಾಮಯ್ಯ ಜೊತೆಗೆ ಇದ್ದ ಹಿರಿಯರನ್ನು ಏನು ಮಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಸಚಿವ ಸಂಪುಟದ ಸಚಿವರು ಸಿದ್ದರಾಮಯ್ಯ ಮೇಲಿನ ಆರೋಪಕ್ಕೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. ಇಡಿ ಇಲಾಖೆ ಸೇರಿದಂತೆ ಕೋರ್ಟ್ ಅದೇಶಕ್ಕೆ ತಲೆ ಬಾಗಬೇಕು. ಸಿದ್ದರಾಮಯ್ಯ ಅವರು ಅಧಿಕಾರಕಾದ ದುರಾಸೆಯಿಂದ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳನ್ನು ಮುಚ್ಚಿಟ್ಟುಕೊಳ್ಳಲು ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಹೇಳಿದ್ದಾರೆ.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

2 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

3 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

23 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

24 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 days ago