ಕಾಂಗ್ರೆಸ್ ನಿಂದ ರಾಜ್ಯದ ಜನರಿಗೆ ಗ್ಯಾರಂಟಿ ಸೌಲಭ್ಯ ಹೆಸರಲ್ಲಿ ಮೋಸ: ನಗರದಲ್ಲಿ ಮಾಜಿ ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೊಂದಲ‌ ಸೃಷ್ಟಿಯಾಗಿದೆ. ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಗೆದ್ದಿರುವ ಸರ್ಕಾರವು ಜನರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸುವಲ್ಲಿ ವಿಫಲವಾಗುತ್ತಿದೆ. ಜನರಿಂದ ಟ್ಯಾಕ್ಸ್ ಮೂಲಕ ಹಣ ಪಡೆದು ನಮ್ಮ ಸರ್ಕಾರ ಎಲ್ಲಾ ಫ್ರೀ ನೀಡುತ್ತದೆ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಗರದ ಡಿಕ್ರಾಸ್ ಬಳಿ ಶಾಸಕ ಧೀರಜ್ ಮುನಿರಾಜ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಸ್ಕಾಂ ಡೆಪಾಸಿಟ್ ದರ ಶೇ.65ರಷ್ಟು ಹೆಚ್ಚು ಮಾಡಲಾಗಿದೆ. ಗ್ಯಾರಂಟಿ ಸೌಲಭ್ಯ ಘೋಷಣೆ ವೇಳೆ ಯಾವ ಮಾನದಂಡ ಅನುಸರಿಸಲಿಲ್ಲ, ಈಗ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಆಧಾರ್ ಕಾರ್ಡ್,‌ ಪಾನ್ ಕಾರ್ಡ್, ಜಿಎಸ್ ಟಿ ಬಿಲ್ ಸೇರಿದಂತೆ ಇತರೆ ಮಾನದಂಡಗಳನ್ನು ಜನರ ಮೇಲೆ ಹೇರಿ ಗ್ಯಾರಂಟಿ ಸೌಲಭ್ಯ ಜನರಿಗೆ ತಲುಪದ ರೀತಿ ಮಾಡಲಾಗುತ್ತಿದೆ ಎಂದರು.

ಸಚಿವ ಚೆಲುವರಾಯಸ್ವಾಮಿ ಹೇಳಿದ ಹಾಗೆ ನಾವು ವೋಟ್ ಗಾಗಿ ಗ್ಯಾರಂಟಿ ಸೌಲಭ್ಯ ಗಿಮಿಕ್ ಮಾಡಿದ್ದೇವೆ ಎಂದಿದ್ದಾರೆ. ಅವರು ಹೇಳಿದಾಗೆ ಗಿಮಿಕ್ ಮಾಡಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಗುಡುಗಿದ್ದಾರೆ.

ಈ ಹಿಂದೆ ಜೆಡಿಎಸ್ ಜೊತೆ ನಾವಷ್ಟಕ್ಕೆ ನಾವೆ ಹೋಗಿ ಮೈತ್ರಿ ಮಾಡಿ ಸರ್ಕಾರ ರಚನೆ ಮಾಡಿಲ್ಲ, ಜೆಡಿಎಸ್ ನವರೆ ಬಂದು ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದು, ನಮಗೆ ಸಿಎಂ ಸ್ಥಾನ ನಮಗೆ ಬಿಟ್ಟುಕೊಟ್ಟಿದ್ದರೆ ಅದು ದಾನ ಮಾಡಿದ ಹಾಗೆ ಎಂದು ತಿಳಿಸಿದರು.

Ramesh Babu

Journalist

View Comments

  • E lofer BJP yavaru yen sachana , brastarige brasta nanmaklu, papa avaru yeno kodtavre, uri atikondide avarigella ,

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

6 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

9 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago