ಕಾಂಗ್ರೆಸ್ ನಿಂದ ರಾಜ್ಯದ ಜನರಿಗೆ ಗ್ಯಾರಂಟಿ ಸೌಲಭ್ಯ ಹೆಸರಲ್ಲಿ ಮೋಸ: ನಗರದಲ್ಲಿ ಮಾಜಿ ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೊಂದಲ‌ ಸೃಷ್ಟಿಯಾಗಿದೆ. ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಗೆದ್ದಿರುವ ಸರ್ಕಾರವು ಜನರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸುವಲ್ಲಿ ವಿಫಲವಾಗುತ್ತಿದೆ. ಜನರಿಂದ ಟ್ಯಾಕ್ಸ್ ಮೂಲಕ ಹಣ ಪಡೆದು ನಮ್ಮ ಸರ್ಕಾರ ಎಲ್ಲಾ ಫ್ರೀ ನೀಡುತ್ತದೆ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಗರದ ಡಿಕ್ರಾಸ್ ಬಳಿ ಶಾಸಕ ಧೀರಜ್ ಮುನಿರಾಜ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಸ್ಕಾಂ ಡೆಪಾಸಿಟ್ ದರ ಶೇ.65ರಷ್ಟು ಹೆಚ್ಚು ಮಾಡಲಾಗಿದೆ. ಗ್ಯಾರಂಟಿ ಸೌಲಭ್ಯ ಘೋಷಣೆ ವೇಳೆ ಯಾವ ಮಾನದಂಡ ಅನುಸರಿಸಲಿಲ್ಲ, ಈಗ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಆಧಾರ್ ಕಾರ್ಡ್,‌ ಪಾನ್ ಕಾರ್ಡ್, ಜಿಎಸ್ ಟಿ ಬಿಲ್ ಸೇರಿದಂತೆ ಇತರೆ ಮಾನದಂಡಗಳನ್ನು ಜನರ ಮೇಲೆ ಹೇರಿ ಗ್ಯಾರಂಟಿ ಸೌಲಭ್ಯ ಜನರಿಗೆ ತಲುಪದ ರೀತಿ ಮಾಡಲಾಗುತ್ತಿದೆ ಎಂದರು.

ಸಚಿವ ಚೆಲುವರಾಯಸ್ವಾಮಿ ಹೇಳಿದ ಹಾಗೆ ನಾವು ವೋಟ್ ಗಾಗಿ ಗ್ಯಾರಂಟಿ ಸೌಲಭ್ಯ ಗಿಮಿಕ್ ಮಾಡಿದ್ದೇವೆ ಎಂದಿದ್ದಾರೆ. ಅವರು ಹೇಳಿದಾಗೆ ಗಿಮಿಕ್ ಮಾಡಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಗುಡುಗಿದ್ದಾರೆ.

ಈ ಹಿಂದೆ ಜೆಡಿಎಸ್ ಜೊತೆ ನಾವಷ್ಟಕ್ಕೆ ನಾವೆ ಹೋಗಿ ಮೈತ್ರಿ ಮಾಡಿ ಸರ್ಕಾರ ರಚನೆ ಮಾಡಿಲ್ಲ, ಜೆಡಿಎಸ್ ನವರೆ ಬಂದು ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದು, ನಮಗೆ ಸಿಎಂ ಸ್ಥಾನ ನಮಗೆ ಬಿಟ್ಟುಕೊಟ್ಟಿದ್ದರೆ ಅದು ದಾನ ಮಾಡಿದ ಹಾಗೆ ಎಂದು ತಿಳಿಸಿದರು.

Ramesh Babu

Journalist

View Comments

  • E lofer BJP yavaru yen sachana , brastarige brasta nanmaklu, papa avaru yeno kodtavre, uri atikondide avarigella ,

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

13 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago