ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೊಂದಲ ಸೃಷ್ಟಿಯಾಗಿದೆ. ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಗೆದ್ದಿರುವ ಸರ್ಕಾರವು ಜನರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸುವಲ್ಲಿ ವಿಫಲವಾಗುತ್ತಿದೆ. ಜನರಿಂದ ಟ್ಯಾಕ್ಸ್ ಮೂಲಕ ಹಣ ಪಡೆದು ನಮ್ಮ ಸರ್ಕಾರ ಎಲ್ಲಾ ಫ್ರೀ ನೀಡುತ್ತದೆ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ನಗರದ ಡಿಕ್ರಾಸ್ ಬಳಿ ಶಾಸಕ ಧೀರಜ್ ಮುನಿರಾಜ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಸ್ಕಾಂ ಡೆಪಾಸಿಟ್ ದರ ಶೇ.65ರಷ್ಟು ಹೆಚ್ಚು ಮಾಡಲಾಗಿದೆ. ಗ್ಯಾರಂಟಿ ಸೌಲಭ್ಯ ಘೋಷಣೆ ವೇಳೆ ಯಾವ ಮಾನದಂಡ ಅನುಸರಿಸಲಿಲ್ಲ, ಈಗ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಆಧಾರ್ ಕಾರ್ಡ್, ಪಾನ್ ಕಾರ್ಡ್, ಜಿಎಸ್ ಟಿ ಬಿಲ್ ಸೇರಿದಂತೆ ಇತರೆ ಮಾನದಂಡಗಳನ್ನು ಜನರ ಮೇಲೆ ಹೇರಿ ಗ್ಯಾರಂಟಿ ಸೌಲಭ್ಯ ಜನರಿಗೆ ತಲುಪದ ರೀತಿ ಮಾಡಲಾಗುತ್ತಿದೆ ಎಂದರು.
ಸಚಿವ ಚೆಲುವರಾಯಸ್ವಾಮಿ ಹೇಳಿದ ಹಾಗೆ ನಾವು ವೋಟ್ ಗಾಗಿ ಗ್ಯಾರಂಟಿ ಸೌಲಭ್ಯ ಗಿಮಿಕ್ ಮಾಡಿದ್ದೇವೆ ಎಂದಿದ್ದಾರೆ. ಅವರು ಹೇಳಿದಾಗೆ ಗಿಮಿಕ್ ಮಾಡಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಗುಡುಗಿದ್ದಾರೆ.
ಈ ಹಿಂದೆ ಜೆಡಿಎಸ್ ಜೊತೆ ನಾವಷ್ಟಕ್ಕೆ ನಾವೆ ಹೋಗಿ ಮೈತ್ರಿ ಮಾಡಿ ಸರ್ಕಾರ ರಚನೆ ಮಾಡಿಲ್ಲ, ಜೆಡಿಎಸ್ ನವರೆ ಬಂದು ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದು, ನಮಗೆ ಸಿಎಂ ಸ್ಥಾನ ನಮಗೆ ಬಿಟ್ಟುಕೊಟ್ಟಿದ್ದರೆ ಅದು ದಾನ ಮಾಡಿದ ಹಾಗೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
View Comments
E lofer BJP yavaru yen sachana , brastarige brasta nanmaklu, papa avaru yeno kodtavre, uri atikondide avarigella ,