ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೊಂದಲ ಸೃಷ್ಟಿಯಾಗಿದೆ. ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಗೆದ್ದಿರುವ ಸರ್ಕಾರವು ಜನರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸುವಲ್ಲಿ ವಿಫಲವಾಗುತ್ತಿದೆ. ಜನರಿಂದ ಟ್ಯಾಕ್ಸ್ ಮೂಲಕ ಹಣ ಪಡೆದು ನಮ್ಮ ಸರ್ಕಾರ ಎಲ್ಲಾ ಫ್ರೀ ನೀಡುತ್ತದೆ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ನಗರದ ಡಿಕ್ರಾಸ್ ಬಳಿ ಶಾಸಕ ಧೀರಜ್ ಮುನಿರಾಜ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಸ್ಕಾಂ ಡೆಪಾಸಿಟ್ ದರ ಶೇ.65ರಷ್ಟು ಹೆಚ್ಚು ಮಾಡಲಾಗಿದೆ. ಗ್ಯಾರಂಟಿ ಸೌಲಭ್ಯ ಘೋಷಣೆ ವೇಳೆ ಯಾವ ಮಾನದಂಡ ಅನುಸರಿಸಲಿಲ್ಲ, ಈಗ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಆಧಾರ್ ಕಾರ್ಡ್, ಪಾನ್ ಕಾರ್ಡ್, ಜಿಎಸ್ ಟಿ ಬಿಲ್ ಸೇರಿದಂತೆ ಇತರೆ ಮಾನದಂಡಗಳನ್ನು ಜನರ ಮೇಲೆ ಹೇರಿ ಗ್ಯಾರಂಟಿ ಸೌಲಭ್ಯ ಜನರಿಗೆ ತಲುಪದ ರೀತಿ ಮಾಡಲಾಗುತ್ತಿದೆ ಎಂದರು.
ಸಚಿವ ಚೆಲುವರಾಯಸ್ವಾಮಿ ಹೇಳಿದ ಹಾಗೆ ನಾವು ವೋಟ್ ಗಾಗಿ ಗ್ಯಾರಂಟಿ ಸೌಲಭ್ಯ ಗಿಮಿಕ್ ಮಾಡಿದ್ದೇವೆ ಎಂದಿದ್ದಾರೆ. ಅವರು ಹೇಳಿದಾಗೆ ಗಿಮಿಕ್ ಮಾಡಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಗುಡುಗಿದ್ದಾರೆ.
ಈ ಹಿಂದೆ ಜೆಡಿಎಸ್ ಜೊತೆ ನಾವಷ್ಟಕ್ಕೆ ನಾವೆ ಹೋಗಿ ಮೈತ್ರಿ ಮಾಡಿ ಸರ್ಕಾರ ರಚನೆ ಮಾಡಿಲ್ಲ, ಜೆಡಿಎಸ್ ನವರೆ ಬಂದು ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದು, ನಮಗೆ ಸಿಎಂ ಸ್ಥಾನ ನಮಗೆ ಬಿಟ್ಟುಕೊಟ್ಟಿದ್ದರೆ ಅದು ದಾನ ಮಾಡಿದ ಹಾಗೆ ಎಂದು ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
View Comments
E lofer BJP yavaru yen sachana , brastarige brasta nanmaklu, papa avaru yeno kodtavre, uri atikondide avarigella ,