ಕಾಂಗ್ರೆಸ್ ನಿಂದ ರಾಜ್ಯದ ಜನರಿಗೆ ಗ್ಯಾರಂಟಿ ಸೌಲಭ್ಯ ಹೆಸರಲ್ಲಿ ಮೋಸ: ನಗರದಲ್ಲಿ ಮಾಜಿ ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೊಂದಲ‌ ಸೃಷ್ಟಿಯಾಗಿದೆ. ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಗೆದ್ದಿರುವ ಸರ್ಕಾರವು ಜನರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸುವಲ್ಲಿ ವಿಫಲವಾಗುತ್ತಿದೆ. ಜನರಿಂದ ಟ್ಯಾಕ್ಸ್ ಮೂಲಕ ಹಣ ಪಡೆದು ನಮ್ಮ ಸರ್ಕಾರ ಎಲ್ಲಾ ಫ್ರೀ ನೀಡುತ್ತದೆ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಗರದ ಡಿಕ್ರಾಸ್ ಬಳಿ ಶಾಸಕ ಧೀರಜ್ ಮುನಿರಾಜ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಸ್ಕಾಂ ಡೆಪಾಸಿಟ್ ದರ ಶೇ.65ರಷ್ಟು ಹೆಚ್ಚು ಮಾಡಲಾಗಿದೆ. ಗ್ಯಾರಂಟಿ ಸೌಲಭ್ಯ ಘೋಷಣೆ ವೇಳೆ ಯಾವ ಮಾನದಂಡ ಅನುಸರಿಸಲಿಲ್ಲ, ಈಗ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಆಧಾರ್ ಕಾರ್ಡ್,‌ ಪಾನ್ ಕಾರ್ಡ್, ಜಿಎಸ್ ಟಿ ಬಿಲ್ ಸೇರಿದಂತೆ ಇತರೆ ಮಾನದಂಡಗಳನ್ನು ಜನರ ಮೇಲೆ ಹೇರಿ ಗ್ಯಾರಂಟಿ ಸೌಲಭ್ಯ ಜನರಿಗೆ ತಲುಪದ ರೀತಿ ಮಾಡಲಾಗುತ್ತಿದೆ ಎಂದರು.

ಸಚಿವ ಚೆಲುವರಾಯಸ್ವಾಮಿ ಹೇಳಿದ ಹಾಗೆ ನಾವು ವೋಟ್ ಗಾಗಿ ಗ್ಯಾರಂಟಿ ಸೌಲಭ್ಯ ಗಿಮಿಕ್ ಮಾಡಿದ್ದೇವೆ ಎಂದಿದ್ದಾರೆ. ಅವರು ಹೇಳಿದಾಗೆ ಗಿಮಿಕ್ ಮಾಡಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಗುಡುಗಿದ್ದಾರೆ.

ಈ ಹಿಂದೆ ಜೆಡಿಎಸ್ ಜೊತೆ ನಾವಷ್ಟಕ್ಕೆ ನಾವೆ ಹೋಗಿ ಮೈತ್ರಿ ಮಾಡಿ ಸರ್ಕಾರ ರಚನೆ ಮಾಡಿಲ್ಲ, ಜೆಡಿಎಸ್ ನವರೆ ಬಂದು ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದು, ನಮಗೆ ಸಿಎಂ ಸ್ಥಾನ ನಮಗೆ ಬಿಟ್ಟುಕೊಟ್ಟಿದ್ದರೆ ಅದು ದಾನ ಮಾಡಿದ ಹಾಗೆ ಎಂದು ತಿಳಿಸಿದರು.

Ramesh Babu

Journalist

View Comments

  • E lofer BJP yavaru yen sachana , brastarige brasta nanmaklu, papa avaru yeno kodtavre, uri atikondide avarigella ,

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

1 hour ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

4 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

6 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

21 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago