ಕಾಂಗ್ರೆಸ್ ನಿಂದ ರಾಜ್ಯದ ಜನರಿಗೆ ಗ್ಯಾರಂಟಿ ಸೌಲಭ್ಯ ಹೆಸರಲ್ಲಿ ಮೋಸ: ನಗರದಲ್ಲಿ ಮಾಜಿ ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೊಂದಲ‌ ಸೃಷ್ಟಿಯಾಗಿದೆ. ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಗೆದ್ದಿರುವ ಸರ್ಕಾರವು ಜನರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸುವಲ್ಲಿ ವಿಫಲವಾಗುತ್ತಿದೆ. ಜನರಿಂದ ಟ್ಯಾಕ್ಸ್ ಮೂಲಕ ಹಣ ಪಡೆದು ನಮ್ಮ ಸರ್ಕಾರ ಎಲ್ಲಾ ಫ್ರೀ ನೀಡುತ್ತದೆ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಗರದ ಡಿಕ್ರಾಸ್ ಬಳಿ ಶಾಸಕ ಧೀರಜ್ ಮುನಿರಾಜ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಸ್ಕಾಂ ಡೆಪಾಸಿಟ್ ದರ ಶೇ.65ರಷ್ಟು ಹೆಚ್ಚು ಮಾಡಲಾಗಿದೆ. ಗ್ಯಾರಂಟಿ ಸೌಲಭ್ಯ ಘೋಷಣೆ ವೇಳೆ ಯಾವ ಮಾನದಂಡ ಅನುಸರಿಸಲಿಲ್ಲ, ಈಗ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಆಧಾರ್ ಕಾರ್ಡ್,‌ ಪಾನ್ ಕಾರ್ಡ್, ಜಿಎಸ್ ಟಿ ಬಿಲ್ ಸೇರಿದಂತೆ ಇತರೆ ಮಾನದಂಡಗಳನ್ನು ಜನರ ಮೇಲೆ ಹೇರಿ ಗ್ಯಾರಂಟಿ ಸೌಲಭ್ಯ ಜನರಿಗೆ ತಲುಪದ ರೀತಿ ಮಾಡಲಾಗುತ್ತಿದೆ ಎಂದರು.

ಸಚಿವ ಚೆಲುವರಾಯಸ್ವಾಮಿ ಹೇಳಿದ ಹಾಗೆ ನಾವು ವೋಟ್ ಗಾಗಿ ಗ್ಯಾರಂಟಿ ಸೌಲಭ್ಯ ಗಿಮಿಕ್ ಮಾಡಿದ್ದೇವೆ ಎಂದಿದ್ದಾರೆ. ಅವರು ಹೇಳಿದಾಗೆ ಗಿಮಿಕ್ ಮಾಡಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಗುಡುಗಿದ್ದಾರೆ.

ಈ ಹಿಂದೆ ಜೆಡಿಎಸ್ ಜೊತೆ ನಾವಷ್ಟಕ್ಕೆ ನಾವೆ ಹೋಗಿ ಮೈತ್ರಿ ಮಾಡಿ ಸರ್ಕಾರ ರಚನೆ ಮಾಡಿಲ್ಲ, ಜೆಡಿಎಸ್ ನವರೆ ಬಂದು ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದು, ನಮಗೆ ಸಿಎಂ ಸ್ಥಾನ ನಮಗೆ ಬಿಟ್ಟುಕೊಟ್ಟಿದ್ದರೆ ಅದು ದಾನ ಮಾಡಿದ ಹಾಗೆ ಎಂದು ತಿಳಿಸಿದರು.

Ramesh Babu

Journalist

View Comments

  • E lofer BJP yavaru yen sachana , brastarige brasta nanmaklu, papa avaru yeno kodtavre, uri atikondide avarigella ,

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

16 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

21 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago