Categories: ಕೋಲಾರ

ಕಾಂಗ್ರೆಸ್ ಪಕ್ಷಕ್ಕೆ ಸೇರಲು ಜೆಡಿಎಸ್‌ನ ಇಬ್ಬರು ಶಾಸಕರು ಸಿದ್ಧ- ಸ್ಪೋಟಕ ಸುಳಿವು ನೀಡಿದ ಶಾಸಕ ಕೊತ್ತೂರು ಮಂಜುನಾಥ್ !

ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರಲು ಪಕ್ಷದ ಹಿರಿಯ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯೊಂದಕ್ಕೆ ಆಗಮಿಸಿದ ವೇಳೆ ಶಾಸಕದ್ವಯರಾದ ಕೊತ್ತೂರು ಮಂಜುನಾಥ್ ಹಾಗೂ ಅನಿಲ್ ಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರೊಬ್ಬರ ಸಹಕಾರದಲ್ಲಿ ಕೋಲಾರದ ಇಬ್ಬರು ಜೆಡಿಎಸ್ ಶಾಸಕರು ಸ್ವಯಂ ಪ್ರೇರಣೆಯಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಹ ಖಚಿತ ಪಡಿಸಿದ್ದು, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿರುವ ಸ್ಪೋಟಕ ಮಾಹಿತಿಯನ್ನು ಶಾಸಕ ಕೊತ್ತೂರು ಮಂಜುನಾಥ್ ನೀಡಿದ್ದಾರೆ.

ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುತ್ತಾರೆ. ಇಬ್ಬರು ಜೆಡಿಎಸ್ ಶಾಸಕರು ಕೆಪಿಸಿಸಿ ಅಧ್ಯಕ್ಷರು ಮತ್ತು ಸಿಎಂ ಸಿದ್ದರಾಮಯ್ಯ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. ಈಗಾಗಲೇ ಶ್ರೀನಿವಾಸಪುರದಲ್ಲಿ ವೆಂಕಟಶಿವಾರೆಡ್ಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಶಾಸಕ ರಮೇಶ್ ಕುಮಾರ್ ಜೊತೆ ಚರ್ಚೆ ಮಾಡಿದ್ದಾರೆ. ರಮೇಶ್ ಕುಮಾರ್ ಅವರ ಜೊತೆ ಜೆಡಿಎಸ್ ಶಾಸಕರ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಮಾತನಾಡಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಮುಂಚೆಯೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ, ವೆಂಕಟಶಿವಾರೆಡ್ಡಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿ ರಮೇಶ್ ಕುಮಾರ್ ಅವರಿಂದ ಸೂಚಕರಾಗಿ ಸಹಿ ಮಾಡಿಸಿ ಅವರನ್ನು ಗೆಲ್ಲಿಸಿಕೊಳ್ಳತ್ತೇವೆ, ಅದೇ ರೀತಿ ಸಮೃದ್ಧಿ ಮಂಜುನಾಥ್ ರಾಜೀನಾಮೆ ನೀಡಿದರೆ, ಮುಂದೆ ನಡೆಯುವ ಮದ್ಯಂತರ ಚುನಾವಣೆಯಲ್ಲಿ ಸಮೃದ್ಧಿ ಮಂಜುನಾಥ್ ಅವರಿಗೆ ಸ್ವತಃ ಕೊತ್ತೂರು ಮಂಜುನಾಥ್ ಅದ ನಾನೇ ಸೂಚಕನಾಗುತ್ತೇನೆ ಎಂದರು.

ವಿಧಾನ ಪರಿಷತ್ ಸದಸ್ಯ ಅನಿಲ್‌ಕುಮಾರ್ ಮಾತನಾಡಿ, ಜೆಡಿಎಸ್ ಶಾಸಕರು ಪಕ್ಷ ಸೇರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿರುವ ಹಿನ್ನಲೆ ಹೈಕಮಾಂಡ್ ಹೇಳಿದಂತೆ ಪಕ್ಷದ ಬಲವರ್ಧನೆಗಾಗಿ ಕೆಲಸ ಮಾಡುತ್ತೇವೆ. ವೆಂಕಟಶಿವಾರೆಡ್ಡಿ ಪಕ್ಷಕ್ಕೆ ಸೇರಿದರೆ ರಮೇಶ್ ಕುಮಾರ್ ಅವರ ಸ್ಥಾನಮಾನ ಅಭಾಧಿತವಾಗಿರುತ್ತದೆ. ರಮೇಶ್‌ಕುಮಾರ್ ಅವರನ್ನು ಪರಿಷತ್ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಿಯಾದರೂ ಅವರನ್ನು ಪಕ್ಷ ಉಳಿಸಿಕೊಳ್ಳುತ್ತದೆ ಎಂದರು.

ಲೋಕಸಭಾ ಚುನಾವಣೆಗೂ ಮುಂಚಿತವಾಗಿಯೇ ಈ ಬೆಳವಣಿಗೆ ನಡೆಯುತ್ತಿರುವುದು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಾಯವಾಗಲಿದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಇನ್ನೂ ತಯಾರಾಗಿಲ್ಲ, ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆಯಿಲ್ಲ, ಪಕ್ಷದ ಅಧ್ಯಕ್ಷರಾಗಲೀ, ಮುಖ್ಯಮಂತ್ರಿಗಳಾಗಲೀ ಅಥವಾ ರಾಜ್ಯದ ಉಸ್ತುವಾರಿಯಾದ ಸುರ್ಜೇವಾಲ ಆಗಲಿ ಯಾರೂ ಸಹ ಪಕ್ಷದೆ ಪಟ್ಟಿಯ ಬಗ್ಗೆ ಮಾಹಿತಿ ನೀಡಿಲ್ಲ, ಅಂತಿಮವಾಗಿ ಹೈಕಮಾಂಡ್ ತೀರ್ಮಾನದಂತೆ ಎಲ್ಲರೂ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

22 hours ago