Categories: ಕೋಲಾರ

ಕಾಂಗ್ರೆಸ್ ಪಕ್ಷಕ್ಕೆ ಸೇರಲು ಜೆಡಿಎಸ್‌ನ ಇಬ್ಬರು ಶಾಸಕರು ಸಿದ್ಧ- ಸ್ಪೋಟಕ ಸುಳಿವು ನೀಡಿದ ಶಾಸಕ ಕೊತ್ತೂರು ಮಂಜುನಾಥ್ !

ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರಲು ಪಕ್ಷದ ಹಿರಿಯ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯೊಂದಕ್ಕೆ ಆಗಮಿಸಿದ ವೇಳೆ ಶಾಸಕದ್ವಯರಾದ ಕೊತ್ತೂರು ಮಂಜುನಾಥ್ ಹಾಗೂ ಅನಿಲ್ ಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರೊಬ್ಬರ ಸಹಕಾರದಲ್ಲಿ ಕೋಲಾರದ ಇಬ್ಬರು ಜೆಡಿಎಸ್ ಶಾಸಕರು ಸ್ವಯಂ ಪ್ರೇರಣೆಯಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಹ ಖಚಿತ ಪಡಿಸಿದ್ದು, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿರುವ ಸ್ಪೋಟಕ ಮಾಹಿತಿಯನ್ನು ಶಾಸಕ ಕೊತ್ತೂರು ಮಂಜುನಾಥ್ ನೀಡಿದ್ದಾರೆ.

ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುತ್ತಾರೆ. ಇಬ್ಬರು ಜೆಡಿಎಸ್ ಶಾಸಕರು ಕೆಪಿಸಿಸಿ ಅಧ್ಯಕ್ಷರು ಮತ್ತು ಸಿಎಂ ಸಿದ್ದರಾಮಯ್ಯ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. ಈಗಾಗಲೇ ಶ್ರೀನಿವಾಸಪುರದಲ್ಲಿ ವೆಂಕಟಶಿವಾರೆಡ್ಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಶಾಸಕ ರಮೇಶ್ ಕುಮಾರ್ ಜೊತೆ ಚರ್ಚೆ ಮಾಡಿದ್ದಾರೆ. ರಮೇಶ್ ಕುಮಾರ್ ಅವರ ಜೊತೆ ಜೆಡಿಎಸ್ ಶಾಸಕರ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಮಾತನಾಡಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಮುಂಚೆಯೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ, ವೆಂಕಟಶಿವಾರೆಡ್ಡಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿ ರಮೇಶ್ ಕುಮಾರ್ ಅವರಿಂದ ಸೂಚಕರಾಗಿ ಸಹಿ ಮಾಡಿಸಿ ಅವರನ್ನು ಗೆಲ್ಲಿಸಿಕೊಳ್ಳತ್ತೇವೆ, ಅದೇ ರೀತಿ ಸಮೃದ್ಧಿ ಮಂಜುನಾಥ್ ರಾಜೀನಾಮೆ ನೀಡಿದರೆ, ಮುಂದೆ ನಡೆಯುವ ಮದ್ಯಂತರ ಚುನಾವಣೆಯಲ್ಲಿ ಸಮೃದ್ಧಿ ಮಂಜುನಾಥ್ ಅವರಿಗೆ ಸ್ವತಃ ಕೊತ್ತೂರು ಮಂಜುನಾಥ್ ಅದ ನಾನೇ ಸೂಚಕನಾಗುತ್ತೇನೆ ಎಂದರು.

ವಿಧಾನ ಪರಿಷತ್ ಸದಸ್ಯ ಅನಿಲ್‌ಕುಮಾರ್ ಮಾತನಾಡಿ, ಜೆಡಿಎಸ್ ಶಾಸಕರು ಪಕ್ಷ ಸೇರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿರುವ ಹಿನ್ನಲೆ ಹೈಕಮಾಂಡ್ ಹೇಳಿದಂತೆ ಪಕ್ಷದ ಬಲವರ್ಧನೆಗಾಗಿ ಕೆಲಸ ಮಾಡುತ್ತೇವೆ. ವೆಂಕಟಶಿವಾರೆಡ್ಡಿ ಪಕ್ಷಕ್ಕೆ ಸೇರಿದರೆ ರಮೇಶ್ ಕುಮಾರ್ ಅವರ ಸ್ಥಾನಮಾನ ಅಭಾಧಿತವಾಗಿರುತ್ತದೆ. ರಮೇಶ್‌ಕುಮಾರ್ ಅವರನ್ನು ಪರಿಷತ್ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಿಯಾದರೂ ಅವರನ್ನು ಪಕ್ಷ ಉಳಿಸಿಕೊಳ್ಳುತ್ತದೆ ಎಂದರು.

ಲೋಕಸಭಾ ಚುನಾವಣೆಗೂ ಮುಂಚಿತವಾಗಿಯೇ ಈ ಬೆಳವಣಿಗೆ ನಡೆಯುತ್ತಿರುವುದು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಾಯವಾಗಲಿದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಇನ್ನೂ ತಯಾರಾಗಿಲ್ಲ, ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆಯಿಲ್ಲ, ಪಕ್ಷದ ಅಧ್ಯಕ್ಷರಾಗಲೀ, ಮುಖ್ಯಮಂತ್ರಿಗಳಾಗಲೀ ಅಥವಾ ರಾಜ್ಯದ ಉಸ್ತುವಾರಿಯಾದ ಸುರ್ಜೇವಾಲ ಆಗಲಿ ಯಾರೂ ಸಹ ಪಕ್ಷದೆ ಪಟ್ಟಿಯ ಬಗ್ಗೆ ಮಾಹಿತಿ ನೀಡಿಲ್ಲ, ಅಂತಿಮವಾಗಿ ಹೈಕಮಾಂಡ್ ತೀರ್ಮಾನದಂತೆ ಎಲ್ಲರೂ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago