Categories: ಕೋಲಾರ

ಕಾಂಗ್ರೆಸ್‌ ಪಕ್ಷದವರು ಮನೆಮುರುಕ ಸಂಸ್ಕೃತ ಉಳ್ಳವರು- ಬಣಕನಹಳ್ಳಿ ನಟರಾಜ್‌

ಕೋಲಾರ: ಕಾಂಗ್ರೆಸ್‌ ಪಕ್ಷದವರು ಮನೆಮುರುಕ ಸಂಸ್ಕೃತ ಉಳ್ಳವರಾಗಿದ್ದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದ ಮತ್ತೊಬ್ಬರ ಮನೆ ಹಾಳು ಮಾಡಲು ಹೊರಟಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್‌ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯ ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ಅವರಿಗೆ ಯಾವುದೇ ತತ್ವಸಿದ್ಧಾಂತಗಳು ಇಲ್ಲ ಯಾರ ಮನೆ ಬೇಕಾದರೂ ಹಾಳು ಮಾಡಲು ಸಿದ್ದರಿದ್ದಾರೆ ಅದಕ್ಕಾಗಿ ನಿದ್ದೆಗೆಟ್ಟು ಕಾಯುತ್ತಿರುತ್ತಾರೆ ಜಿಲ್ಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಮಧ್ಯೆ ಗೊಂದಲ ಮೂಡಿಸಲು ಹಾಗೂ ಜೆಡಿಎಸ್‌ ಪಕ್ಷಕ್ಕೆ ಕೆಟ್ಟ ಹೆಸರು ತರುವುದೇ ಅವರ ಉದ್ದೇಶವಾಗಿದೆ ಎಂದು ಟೀಕಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದರೂ ಕಾಂಗ್ರೆಸ್‌ನ ದಾಹ ತೀರಿದಂತಿಲ್ಲ ನಮ್ಮ ಪಕ್ಷದ ಶಾಸಕರನ್ನು ಸೆಳೆಯಲು ನೋಡುತ್ತಿದ್ದಾರೆ. ಆದರೆ, ಶಾಸಕರಾದ ಸಮೃದ್ಧಿ ಮಂಜುನಾಥ್‌ ಹಾಗೂ ಜಿ.ಕೆ.ವೆಂಕಟಶಿವಾರೆಡ್ಡಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ ಇವರಿಬ್ಬರೂ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ನಿಷ್ಠರಾಗಿ ಮನೆ ಮಕ್ಕಳಂತೆ ಇದ್ದಾರೆ ಪಕ್ಷದ ನೀತಿ ನಿಯತ್ತಿಗೆ ಬದ್ಧವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ಎಂಎಲ್ಸಿ ಅನಿಲ್‌ ಕುಮಾರ್‌ ಅವರ ಆಟ ಯಾವುದೇ ಕಾರಣಕ್ಕೂ ನಡೆಯಲ್ಲ ಮೊದಲು ಮನೆಹಾಳು ಕೆಲಸ ಮಾಡುವುದನ್ನು ಬಿಡಬೇಕು ಈಗಾಗಲೇ ಕ್ಷೇತ್ರದಲ್ಲಿ ಕೊತ್ತೂರು ಮಂಜುನಾಥ್‌ ಅವರನ್ನು ಯಾಕಾಗಿ ಗೆಲ್ಲಿಸಿದೆವೋ ಎಂದು ಕೋಲಾರ ಜನರು ಶಾಪ ಹಾಕುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಹಾಗೂ ದೇವೇಗೌಡರ ನಾಯಕತ್ವದಲ್ಲಿ ಕೋಲಾರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

ತಮ್ಮ ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಸಮೃದ್ಧಿ ಮಂಜುನಾಥ್‌, ವೆಂಕಟಶಿವಾರೆಡ್ಡಿ ಹೋಗಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸಿದರೆ ಹೇಗೆ ಎಂದು ಪ್ರಶ್ನಿಸಿದರು.

ಮೂರು ದಿನಗಳ ಹಿಂದೆಯಷ್ಟೇ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಮೃದ್ಧಿ ಮಂಜುನಾಥ್‌, ವೆಂಕಟಶಿವಾರೆಡ್ಡಿ ಭಾಗಿಯಾಗಿದ್ದರು. ಕೋಲಾರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಒಟ್ಟಾಗಿ ಚರ್ಚಿಸಲಾಗಿದೆ ಎಂದು ಬಣಕನಹಳ್ಳಿ ನಟರಾಜ್ ಹೇಳಿದರು.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

4 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

5 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

13 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

16 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

24 hours ago