Categories: ಕೋಲಾರ

ಕಾಂಗ್ರೆಸ್‌ ಪಕ್ಷದವರು ಮನೆಮುರುಕ ಸಂಸ್ಕೃತ ಉಳ್ಳವರು- ಬಣಕನಹಳ್ಳಿ ನಟರಾಜ್‌

ಕೋಲಾರ: ಕಾಂಗ್ರೆಸ್‌ ಪಕ್ಷದವರು ಮನೆಮುರುಕ ಸಂಸ್ಕೃತ ಉಳ್ಳವರಾಗಿದ್ದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದ ಮತ್ತೊಬ್ಬರ ಮನೆ ಹಾಳು ಮಾಡಲು ಹೊರಟಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್‌ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯ ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ಅವರಿಗೆ ಯಾವುದೇ ತತ್ವಸಿದ್ಧಾಂತಗಳು ಇಲ್ಲ ಯಾರ ಮನೆ ಬೇಕಾದರೂ ಹಾಳು ಮಾಡಲು ಸಿದ್ದರಿದ್ದಾರೆ ಅದಕ್ಕಾಗಿ ನಿದ್ದೆಗೆಟ್ಟು ಕಾಯುತ್ತಿರುತ್ತಾರೆ ಜಿಲ್ಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಮಧ್ಯೆ ಗೊಂದಲ ಮೂಡಿಸಲು ಹಾಗೂ ಜೆಡಿಎಸ್‌ ಪಕ್ಷಕ್ಕೆ ಕೆಟ್ಟ ಹೆಸರು ತರುವುದೇ ಅವರ ಉದ್ದೇಶವಾಗಿದೆ ಎಂದು ಟೀಕಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದರೂ ಕಾಂಗ್ರೆಸ್‌ನ ದಾಹ ತೀರಿದಂತಿಲ್ಲ ನಮ್ಮ ಪಕ್ಷದ ಶಾಸಕರನ್ನು ಸೆಳೆಯಲು ನೋಡುತ್ತಿದ್ದಾರೆ. ಆದರೆ, ಶಾಸಕರಾದ ಸಮೃದ್ಧಿ ಮಂಜುನಾಥ್‌ ಹಾಗೂ ಜಿ.ಕೆ.ವೆಂಕಟಶಿವಾರೆಡ್ಡಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ ಇವರಿಬ್ಬರೂ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ನಿಷ್ಠರಾಗಿ ಮನೆ ಮಕ್ಕಳಂತೆ ಇದ್ದಾರೆ ಪಕ್ಷದ ನೀತಿ ನಿಯತ್ತಿಗೆ ಬದ್ಧವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ಎಂಎಲ್ಸಿ ಅನಿಲ್‌ ಕುಮಾರ್‌ ಅವರ ಆಟ ಯಾವುದೇ ಕಾರಣಕ್ಕೂ ನಡೆಯಲ್ಲ ಮೊದಲು ಮನೆಹಾಳು ಕೆಲಸ ಮಾಡುವುದನ್ನು ಬಿಡಬೇಕು ಈಗಾಗಲೇ ಕ್ಷೇತ್ರದಲ್ಲಿ ಕೊತ್ತೂರು ಮಂಜುನಾಥ್‌ ಅವರನ್ನು ಯಾಕಾಗಿ ಗೆಲ್ಲಿಸಿದೆವೋ ಎಂದು ಕೋಲಾರ ಜನರು ಶಾಪ ಹಾಕುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಹಾಗೂ ದೇವೇಗೌಡರ ನಾಯಕತ್ವದಲ್ಲಿ ಕೋಲಾರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

ತಮ್ಮ ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಸಮೃದ್ಧಿ ಮಂಜುನಾಥ್‌, ವೆಂಕಟಶಿವಾರೆಡ್ಡಿ ಹೋಗಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸಿದರೆ ಹೇಗೆ ಎಂದು ಪ್ರಶ್ನಿಸಿದರು.

ಮೂರು ದಿನಗಳ ಹಿಂದೆಯಷ್ಟೇ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಮೃದ್ಧಿ ಮಂಜುನಾಥ್‌, ವೆಂಕಟಶಿವಾರೆಡ್ಡಿ ಭಾಗಿಯಾಗಿದ್ದರು. ಕೋಲಾರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಒಟ್ಟಾಗಿ ಚರ್ಚಿಸಲಾಗಿದೆ ಎಂದು ಬಣಕನಹಳ್ಳಿ ನಟರಾಜ್ ಹೇಳಿದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

5 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

9 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

10 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

11 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

12 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

15 hours ago