Categories: ಕೋಲಾರ

ಕಾಂಗ್ರೆಸ್‌ ಪಕ್ಷದವರು ಮನೆಮುರುಕ ಸಂಸ್ಕೃತ ಉಳ್ಳವರು- ಬಣಕನಹಳ್ಳಿ ನಟರಾಜ್‌

ಕೋಲಾರ: ಕಾಂಗ್ರೆಸ್‌ ಪಕ್ಷದವರು ಮನೆಮುರುಕ ಸಂಸ್ಕೃತ ಉಳ್ಳವರಾಗಿದ್ದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದ ಮತ್ತೊಬ್ಬರ ಮನೆ ಹಾಳು ಮಾಡಲು ಹೊರಟಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್‌ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯ ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ಅವರಿಗೆ ಯಾವುದೇ ತತ್ವಸಿದ್ಧಾಂತಗಳು ಇಲ್ಲ ಯಾರ ಮನೆ ಬೇಕಾದರೂ ಹಾಳು ಮಾಡಲು ಸಿದ್ದರಿದ್ದಾರೆ ಅದಕ್ಕಾಗಿ ನಿದ್ದೆಗೆಟ್ಟು ಕಾಯುತ್ತಿರುತ್ತಾರೆ ಜಿಲ್ಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಮಧ್ಯೆ ಗೊಂದಲ ಮೂಡಿಸಲು ಹಾಗೂ ಜೆಡಿಎಸ್‌ ಪಕ್ಷಕ್ಕೆ ಕೆಟ್ಟ ಹೆಸರು ತರುವುದೇ ಅವರ ಉದ್ದೇಶವಾಗಿದೆ ಎಂದು ಟೀಕಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದರೂ ಕಾಂಗ್ರೆಸ್‌ನ ದಾಹ ತೀರಿದಂತಿಲ್ಲ ನಮ್ಮ ಪಕ್ಷದ ಶಾಸಕರನ್ನು ಸೆಳೆಯಲು ನೋಡುತ್ತಿದ್ದಾರೆ. ಆದರೆ, ಶಾಸಕರಾದ ಸಮೃದ್ಧಿ ಮಂಜುನಾಥ್‌ ಹಾಗೂ ಜಿ.ಕೆ.ವೆಂಕಟಶಿವಾರೆಡ್ಡಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ ಇವರಿಬ್ಬರೂ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ನಿಷ್ಠರಾಗಿ ಮನೆ ಮಕ್ಕಳಂತೆ ಇದ್ದಾರೆ ಪಕ್ಷದ ನೀತಿ ನಿಯತ್ತಿಗೆ ಬದ್ಧವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ಎಂಎಲ್ಸಿ ಅನಿಲ್‌ ಕುಮಾರ್‌ ಅವರ ಆಟ ಯಾವುದೇ ಕಾರಣಕ್ಕೂ ನಡೆಯಲ್ಲ ಮೊದಲು ಮನೆಹಾಳು ಕೆಲಸ ಮಾಡುವುದನ್ನು ಬಿಡಬೇಕು ಈಗಾಗಲೇ ಕ್ಷೇತ್ರದಲ್ಲಿ ಕೊತ್ತೂರು ಮಂಜುನಾಥ್‌ ಅವರನ್ನು ಯಾಕಾಗಿ ಗೆಲ್ಲಿಸಿದೆವೋ ಎಂದು ಕೋಲಾರ ಜನರು ಶಾಪ ಹಾಕುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಹಾಗೂ ದೇವೇಗೌಡರ ನಾಯಕತ್ವದಲ್ಲಿ ಕೋಲಾರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

ತಮ್ಮ ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಸಮೃದ್ಧಿ ಮಂಜುನಾಥ್‌, ವೆಂಕಟಶಿವಾರೆಡ್ಡಿ ಹೋಗಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸಿದರೆ ಹೇಗೆ ಎಂದು ಪ್ರಶ್ನಿಸಿದರು.

ಮೂರು ದಿನಗಳ ಹಿಂದೆಯಷ್ಟೇ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಮೃದ್ಧಿ ಮಂಜುನಾಥ್‌, ವೆಂಕಟಶಿವಾರೆಡ್ಡಿ ಭಾಗಿಯಾಗಿದ್ದರು. ಕೋಲಾರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಒಟ್ಟಾಗಿ ಚರ್ಚಿಸಲಾಗಿದೆ ಎಂದು ಬಣಕನಹಳ್ಳಿ ನಟರಾಜ್ ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago