ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ ಎಂದರು.
ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಕರ್ನಾಟಕ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದಿದ್ದಾರೆ.
ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…