ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ ಎಂದರು.

ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಕರ್ನಾಟಕ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದಿದ್ದಾರೆ.

ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago