ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ ಎಂದರು.

ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಕರ್ನಾಟಕ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದಿದ್ದಾರೆ.

ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

7 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

9 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

13 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago