ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ ಎಂದರು.

ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಕರ್ನಾಟಕ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದಿದ್ದಾರೆ.

ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 hour ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

2 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

6 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

13 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

16 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago