ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ ಎಂದರು.

ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಕರ್ನಾಟಕ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದಿದ್ದಾರೆ.

ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago