Categories: ಕೋಲಾರ

ಕಾಂಗ್ರೆಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು, ಇವರಿಂದ ಸಾಮಾನ್ಯ ಜನರಿಗೆ ಪ್ರಯೋಜನವಿಲ್ಲ- ಗಾಂಧಿನಗರ ನಾರಾಯಣಸ್ವಾಮಿ

ಕೋಲಾರ: ರಾಜ್ಯದ ಕಾಂಗ್ರೆಸ್ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಅವರ ಪರವಾದ ನೀತಿಗಳ ಜಾರಿಯಿಂದ ಸಾಮಾನ್ಯ ಜನರ ಬದುಕು ದುಸ್ತರಗೊಂಡಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಉರಗಲಿ ಗ್ರಾಪಂ ವ್ಯಾಪ್ತಿಯ ಸಿಪಿಐಎಂ ಶಾಖಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡವರ, ಕಾರ್ಮಿಕರ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವ ಸರ್ಕಾರಗಳು ಸಾಮಾನ್ಯ ಜನರ ಜೀವನವನ್ನು ಕಷ್ಟಕ್ಕೆ ದೂಡುತ್ತಿವೆ. ಕೇಂದ್ರದಲ್ಲಿ ಹತ್ತು ವರ್ಷಗಳ ಬಿಜೆಪಿಯ ನರೇಂದ್ರ ಮೋದಿ ಆಡಳಿತವು ದೇಶದಲ್ಲಿ ಬದಲಾವಣೆ ತರುವುದಾಗಿ ಹೇಳಿ ಬರೀ ಸುಳ್ಳು ಭಾಷಣೆಗಳ ಮುಖಾಂತರ ದಾರಿ ತಪ್ಪಿಸುತ್ತಿದ್ದಾರೆ ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಪ್ರಶ್ನಿಸುವ ಮನೋಭಾವ ಇಲ್ಲವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕಾರ್ಮಿಕರು ಹಾಗೂ ಎಲ್ಲಾ ದುಡಿಯುವ ವರ್ಗದ ಜನರ ರಕ್ಷಣೆಗೆ ಸಿಪಿಐಎಂ ಪಕ್ಷವು ಬದ್ಧವಾಗಿದ್ದು, ಆಳುವ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಡಲು ಎಲ್ಲರೂ ಸಂಘಟಿತರಾಗಬೇಕು ಸಾಮಾನ್ಯ ಜನರ ಸಬ್ಸಿಡಿಗಳನ್ನು ಕಡಿತಗೊಳಿಸಲು ಸರ್ಕಾರಗಳು ಮುಂದಾಗಿದ್ದು ಇದರ ವಿರುದ್ದ ಧ್ವನಿಯಾಗಬೇಕು ಎಂದರು.

ಸಮ್ಮೇಳನದ ಧ್ವಜಾರೋಹಣವನ್ನು ಪಕ್ಷದ ಸದಸ್ಯ ಹನುಮಂತಪುರ ರಾಮಾಂಜಿನಪ್ಪ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ ವಹಿಸಿದ್ದರು ವೇದಿಕೆಯಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಜಿಲ್ಲಾ ಸಮಿತಿ ಸದಸ್ಯೆ ಗಂಗಮ್ಮ, ತಾಲೂಕು ಸಮಿತಿ ಸದಸ್ಯ ಪಿ.ವಿ ರಮಣ್, ಉಪ್ಪುಕುಂಟೆ ಗ್ರಾಪಂ ಸದಸ್ಯ ಸೀನಪ್ಪ, ಗ್ರಾಮದ ಹಿರಿಯ ಮುಖಂಡ ಮುನಿವೆಂಕಟಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

7 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

7 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

10 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago