Categories: ಕೋಲಾರ

ಕಾಂಗ್ರೆಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು, ಇವರಿಂದ ಸಾಮಾನ್ಯ ಜನರಿಗೆ ಪ್ರಯೋಜನವಿಲ್ಲ- ಗಾಂಧಿನಗರ ನಾರಾಯಣಸ್ವಾಮಿ

ಕೋಲಾರ: ರಾಜ್ಯದ ಕಾಂಗ್ರೆಸ್ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಅವರ ಪರವಾದ ನೀತಿಗಳ ಜಾರಿಯಿಂದ ಸಾಮಾನ್ಯ ಜನರ ಬದುಕು ದುಸ್ತರಗೊಂಡಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಉರಗಲಿ ಗ್ರಾಪಂ ವ್ಯಾಪ್ತಿಯ ಸಿಪಿಐಎಂ ಶಾಖಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡವರ, ಕಾರ್ಮಿಕರ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವ ಸರ್ಕಾರಗಳು ಸಾಮಾನ್ಯ ಜನರ ಜೀವನವನ್ನು ಕಷ್ಟಕ್ಕೆ ದೂಡುತ್ತಿವೆ. ಕೇಂದ್ರದಲ್ಲಿ ಹತ್ತು ವರ್ಷಗಳ ಬಿಜೆಪಿಯ ನರೇಂದ್ರ ಮೋದಿ ಆಡಳಿತವು ದೇಶದಲ್ಲಿ ಬದಲಾವಣೆ ತರುವುದಾಗಿ ಹೇಳಿ ಬರೀ ಸುಳ್ಳು ಭಾಷಣೆಗಳ ಮುಖಾಂತರ ದಾರಿ ತಪ್ಪಿಸುತ್ತಿದ್ದಾರೆ ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಪ್ರಶ್ನಿಸುವ ಮನೋಭಾವ ಇಲ್ಲವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕಾರ್ಮಿಕರು ಹಾಗೂ ಎಲ್ಲಾ ದುಡಿಯುವ ವರ್ಗದ ಜನರ ರಕ್ಷಣೆಗೆ ಸಿಪಿಐಎಂ ಪಕ್ಷವು ಬದ್ಧವಾಗಿದ್ದು, ಆಳುವ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಡಲು ಎಲ್ಲರೂ ಸಂಘಟಿತರಾಗಬೇಕು ಸಾಮಾನ್ಯ ಜನರ ಸಬ್ಸಿಡಿಗಳನ್ನು ಕಡಿತಗೊಳಿಸಲು ಸರ್ಕಾರಗಳು ಮುಂದಾಗಿದ್ದು ಇದರ ವಿರುದ್ದ ಧ್ವನಿಯಾಗಬೇಕು ಎಂದರು.

ಸಮ್ಮೇಳನದ ಧ್ವಜಾರೋಹಣವನ್ನು ಪಕ್ಷದ ಸದಸ್ಯ ಹನುಮಂತಪುರ ರಾಮಾಂಜಿನಪ್ಪ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ ವಹಿಸಿದ್ದರು ವೇದಿಕೆಯಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಜಿಲ್ಲಾ ಸಮಿತಿ ಸದಸ್ಯೆ ಗಂಗಮ್ಮ, ತಾಲೂಕು ಸಮಿತಿ ಸದಸ್ಯ ಪಿ.ವಿ ರಮಣ್, ಉಪ್ಪುಕುಂಟೆ ಗ್ರಾಪಂ ಸದಸ್ಯ ಸೀನಪ್ಪ, ಗ್ರಾಮದ ಹಿರಿಯ ಮುಖಂಡ ಮುನಿವೆಂಕಟಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 hour ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

2 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

6 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

13 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

13 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago