Categories: ಕೋಲಾರ

ಕಾಂಗ್ರೆಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು, ಇವರಿಂದ ಸಾಮಾನ್ಯ ಜನರಿಗೆ ಪ್ರಯೋಜನವಿಲ್ಲ- ಗಾಂಧಿನಗರ ನಾರಾಯಣಸ್ವಾಮಿ

ಕೋಲಾರ: ರಾಜ್ಯದ ಕಾಂಗ್ರೆಸ್ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಅವರ ಪರವಾದ ನೀತಿಗಳ ಜಾರಿಯಿಂದ ಸಾಮಾನ್ಯ ಜನರ ಬದುಕು ದುಸ್ತರಗೊಂಡಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಉರಗಲಿ ಗ್ರಾಪಂ ವ್ಯಾಪ್ತಿಯ ಸಿಪಿಐಎಂ ಶಾಖಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡವರ, ಕಾರ್ಮಿಕರ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವ ಸರ್ಕಾರಗಳು ಸಾಮಾನ್ಯ ಜನರ ಜೀವನವನ್ನು ಕಷ್ಟಕ್ಕೆ ದೂಡುತ್ತಿವೆ. ಕೇಂದ್ರದಲ್ಲಿ ಹತ್ತು ವರ್ಷಗಳ ಬಿಜೆಪಿಯ ನರೇಂದ್ರ ಮೋದಿ ಆಡಳಿತವು ದೇಶದಲ್ಲಿ ಬದಲಾವಣೆ ತರುವುದಾಗಿ ಹೇಳಿ ಬರೀ ಸುಳ್ಳು ಭಾಷಣೆಗಳ ಮುಖಾಂತರ ದಾರಿ ತಪ್ಪಿಸುತ್ತಿದ್ದಾರೆ ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಪ್ರಶ್ನಿಸುವ ಮನೋಭಾವ ಇಲ್ಲವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕಾರ್ಮಿಕರು ಹಾಗೂ ಎಲ್ಲಾ ದುಡಿಯುವ ವರ್ಗದ ಜನರ ರಕ್ಷಣೆಗೆ ಸಿಪಿಐಎಂ ಪಕ್ಷವು ಬದ್ಧವಾಗಿದ್ದು, ಆಳುವ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಡಲು ಎಲ್ಲರೂ ಸಂಘಟಿತರಾಗಬೇಕು ಸಾಮಾನ್ಯ ಜನರ ಸಬ್ಸಿಡಿಗಳನ್ನು ಕಡಿತಗೊಳಿಸಲು ಸರ್ಕಾರಗಳು ಮುಂದಾಗಿದ್ದು ಇದರ ವಿರುದ್ದ ಧ್ವನಿಯಾಗಬೇಕು ಎಂದರು.

ಸಮ್ಮೇಳನದ ಧ್ವಜಾರೋಹಣವನ್ನು ಪಕ್ಷದ ಸದಸ್ಯ ಹನುಮಂತಪುರ ರಾಮಾಂಜಿನಪ್ಪ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ ವಹಿಸಿದ್ದರು ವೇದಿಕೆಯಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಜಿಲ್ಲಾ ಸಮಿತಿ ಸದಸ್ಯೆ ಗಂಗಮ್ಮ, ತಾಲೂಕು ಸಮಿತಿ ಸದಸ್ಯ ಪಿ.ವಿ ರಮಣ್, ಉಪ್ಪುಕುಂಟೆ ಗ್ರಾಪಂ ಸದಸ್ಯ ಸೀನಪ್ಪ, ಗ್ರಾಮದ ಹಿರಿಯ ಮುಖಂಡ ಮುನಿವೆಂಕಟಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…

13 hours ago

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…

15 hours ago

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…

18 hours ago

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌ ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…

18 hours ago

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

21 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

1 day ago