Categories: ಕೋಲಾರ

ಕಾಂಗ್ರೆಸ್ ಬೆಂಬಲಿಸಲು ಕಾರ್ಮಿಕರಿಗೆ ಇಂಟಕ್ ಲಕ್ಷ್ಮೀವೆಂಕಟೇಶ್ ಕರೆ

ಕೋಲಾರ: ಕಾಂಗ್ರೆಸ್‌ ಪಕ್ಷದಲ್ಲಿ ದೀನ ದಲಿತರ, ದುರ್ಬಲ ವರ್ಗದವರ, ಅಲ್ಪಸಂಖ್ಯಾತರ, ಕಾರ್ಮಿಕರು ಸೇರಿದಂತೆ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಏಳಿಗೆಗಾಗಿ ದುಡಿಯುತ್ತಾ ಇದೆ. ವಿಶೇಷವಾಗಿ ಕಾರ್ಮಿಕ ಹಿತದೃಷ್ಟಿಯಿಂದ ಇಂಟಕ್‌ ಸಂಸ್ಥೆಯು ದುಡಿಯುತ್ತಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ರಾಜ್ಯ ಇಂಟಕ್‌ ಅಧ್ಯಕ್ಷ ಲಕ್ಷ್ಮೀವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಭಾನುವಾರ ಕಾರ್ಮಿಕರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚು. ಹಿಂದಿನ ರಾಜ್ಯದ ಬಿಜೆಪಿ ಸರ್ಕಾರವು ಕಟ್ಟಡ ಕಾರ್ಮಿಕರ ವಿವಿಧ ಕಿಟ್‌ಗಳ ಹೆಸರಿನಲ್ಲಿ ಬಹುಕೋಟಿ ಹಗರಣವನ್ನು ನಡೆಸಿದ್ದರು ಕಾರ್ಮಿಕರು ಒಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಬಿಜೆಪಿ ತೊಲಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದೊರಕಿಸಿಕೊಟ್ಟಿದ್ದಾರೆ. ಅದೇ ರೀತಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಹ ಕೇಂದ್ರದಲ್ಲಿ ಬಿಜೆಪಿ ತೊಲಗಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹವಾಗಿದೆ. ಕಾನೂನು ಪ್ರಕಾರ ಆ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಕಾರ‌್ಯಕ್ರಮಗಳನ್ನು ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸುವಂತಿಲ್ಲ. ಆದರೆ ಕಾರ್ಮಿಕ ಸಚಿವಾಲಯ ಬೇಕಾಬಿಟ್ಟಿ ಕಾರ್ಯಕ್ರಮಗಳನ್ನು ಮಾಡಿ ಹಣವನ್ನು ನೇರವಾಗಿ ಕಾರ್ಮಿಕರ ಖಾತೆಗೆ ಹೋಗದೇ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಅವರಿಗೆ ಬುದ್ದಿ ಕಲಿಸುವ ಸಂದರ್ಭ ಬಂದಿದೆ ಯೋಚನೆ ಮಾಡುವ ಶಕ್ತಿ ನಿಮಗೆ ಇದೆ ನುಡಿದಂತೆ ನಡೆಯುವ ಕಾಂಗ್ರೆಸ್ ಬೇಕೋ ಕಾರ್ಮಿಕರ ಹಣ ಊಟಿ ಮಾಡುವ ಪಕ್ಷ ಬೇಕೋ ನಿರ್ಧಾರ ಮಾಡಿ ಎಂದರು.

ಈ ಸಂದರ್ಭದಲ್ಲಿ ಇಂಟಕ್ ರಾಜ್ಯ ಕಾರ್ಯಾಧ್ಯಕ್ಷ ಶ್ಯಾಮಣ್ಣರೆಡ್ಡಿ ಮಾತನಾಡಿ, ಕಾರ್ಮಿಕರು ಇಲ್ಲದೇ ಹೋದರೆ ಯಾವುದೇ ಕೆಲಸಗಳು ನಡೆಯದ ಸಂದರ್ಭದಲ್ಲಿ ಬಿಜೆಪಿ ಸರಕಾರಗಳು ಬಡವರ ಕಾರ್ಮಿಕರ ಪರವಾಗಿ ನಿಲ್ಲದೇ ಬಂಡವಾಳಶಾಹಿಗಳ ಭೂಮಾಲೀಕರ ಪರವಾದ ನೀತಿಗಳನ್ನು ತಂದಿದ್ದಾರೆ. ಕಾರ್ಮಿಕರ ಹಕ್ಕುಗಳನ್ನು ನಾಶ ಮಾಡಲು ಹೊರಟಿದ್ದಾರೆ ಈ ಚುನಾವಣೆ ಕಾರ್ಮಿಕರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಚ್ಚತ್ತುಕೊಂಡು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು‌

ಈ ಸಂದರ್ಭದಲ್ಲಿ ಇಂಟಕ್ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ಪ್ರಸ್ತಾವಿಕವಾಗಿ ಮಾತನಾಡಿ, ದೇಶದ ಭವಿಷ್ಯವಾದ ಕಾರ್ಮಿಕರ ಹಣವನ್ನು ದುರ್ಬಳಕೆ ಮಾಡಿಕೊಂಡ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ಕಾರ್ಮಿಕರ ಗುರಿಯಾಗಬೇಕು ಹಿಂದೆ ರಾಜ್ಯದಲ್ಲಿ ಇದ್ದ ಬಿಜೆಪಿ ಸರಕಾರ ಮತ್ತು ಕೇಂದ್ರದಲ್ಲಿನ ಮೋದಿ ಸರ್ಕಾರವು ಕಟ್ಟಡ ಕಾರ್ಮಿಕ ಕಾಯ್ದೆಗಳನ್ನು ರದ್ದುಮಾಡಲು ಹೊರಟಿದೆ. ಇದರ ವಿರುದ್ಧ ಕಾರ್ಮಿಕರು ಎಚ್ಚೆತ್ತುಕೊಂಡಿದ್ದು, ಈ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿ ಎಂದರು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಲೇಬರ್ ಸೆಲ್ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಎಐಟಿಯುಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಸೆಂಟ್ಟ್ರಿಗ್ ಕಟ್ಟಡ ಕಾರ್ಮಿಕ ಸಂಘದ ನವೀನ್ ಬಾಲು, ನ್ಯೂ ಕೋಲಾರ ಕಟ್ಟಡ ಕಾರ್ಮಿಕರ ಸಂಘದ ಶಿವಕುಮಾರ್ ರೆಡ್ಡಿ, ಕಟ್ಟಡ ಕಾರ್ಮಿಕ ಸಂಘಟನೆಯ ಮುಖಂಡರಾದ ನಾಗರಾಜ್, ಚಲಪತಿ, ವೆಂಕಟೇಶ್, ಲಕ್ಷ್ಮೀಕಾಂತಮ್ಮ, ಶಿವಣ್ಣ, ಲಕ್ಷ್ಮಿದೇವಿ, ಗೀತಾ ಮುಂತಾದವರು ಇದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

5 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

6 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

6 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago