Categories: ಕೋಲಾರ

ಕಾಂಗ್ರೆಸ್ ಬೆಂಬಲಿಸಲು ಕಾರ್ಮಿಕರಿಗೆ ಇಂಟಕ್ ಲಕ್ಷ್ಮೀವೆಂಕಟೇಶ್ ಕರೆ

ಕೋಲಾರ: ಕಾಂಗ್ರೆಸ್‌ ಪಕ್ಷದಲ್ಲಿ ದೀನ ದಲಿತರ, ದುರ್ಬಲ ವರ್ಗದವರ, ಅಲ್ಪಸಂಖ್ಯಾತರ, ಕಾರ್ಮಿಕರು ಸೇರಿದಂತೆ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಏಳಿಗೆಗಾಗಿ ದುಡಿಯುತ್ತಾ ಇದೆ. ವಿಶೇಷವಾಗಿ ಕಾರ್ಮಿಕ ಹಿತದೃಷ್ಟಿಯಿಂದ ಇಂಟಕ್‌ ಸಂಸ್ಥೆಯು ದುಡಿಯುತ್ತಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ರಾಜ್ಯ ಇಂಟಕ್‌ ಅಧ್ಯಕ್ಷ ಲಕ್ಷ್ಮೀವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಭಾನುವಾರ ಕಾರ್ಮಿಕರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚು. ಹಿಂದಿನ ರಾಜ್ಯದ ಬಿಜೆಪಿ ಸರ್ಕಾರವು ಕಟ್ಟಡ ಕಾರ್ಮಿಕರ ವಿವಿಧ ಕಿಟ್‌ಗಳ ಹೆಸರಿನಲ್ಲಿ ಬಹುಕೋಟಿ ಹಗರಣವನ್ನು ನಡೆಸಿದ್ದರು ಕಾರ್ಮಿಕರು ಒಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಬಿಜೆಪಿ ತೊಲಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದೊರಕಿಸಿಕೊಟ್ಟಿದ್ದಾರೆ. ಅದೇ ರೀತಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಹ ಕೇಂದ್ರದಲ್ಲಿ ಬಿಜೆಪಿ ತೊಲಗಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹವಾಗಿದೆ. ಕಾನೂನು ಪ್ರಕಾರ ಆ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಕಾರ‌್ಯಕ್ರಮಗಳನ್ನು ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸುವಂತಿಲ್ಲ. ಆದರೆ ಕಾರ್ಮಿಕ ಸಚಿವಾಲಯ ಬೇಕಾಬಿಟ್ಟಿ ಕಾರ್ಯಕ್ರಮಗಳನ್ನು ಮಾಡಿ ಹಣವನ್ನು ನೇರವಾಗಿ ಕಾರ್ಮಿಕರ ಖಾತೆಗೆ ಹೋಗದೇ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಅವರಿಗೆ ಬುದ್ದಿ ಕಲಿಸುವ ಸಂದರ್ಭ ಬಂದಿದೆ ಯೋಚನೆ ಮಾಡುವ ಶಕ್ತಿ ನಿಮಗೆ ಇದೆ ನುಡಿದಂತೆ ನಡೆಯುವ ಕಾಂಗ್ರೆಸ್ ಬೇಕೋ ಕಾರ್ಮಿಕರ ಹಣ ಊಟಿ ಮಾಡುವ ಪಕ್ಷ ಬೇಕೋ ನಿರ್ಧಾರ ಮಾಡಿ ಎಂದರು.

ಈ ಸಂದರ್ಭದಲ್ಲಿ ಇಂಟಕ್ ರಾಜ್ಯ ಕಾರ್ಯಾಧ್ಯಕ್ಷ ಶ್ಯಾಮಣ್ಣರೆಡ್ಡಿ ಮಾತನಾಡಿ, ಕಾರ್ಮಿಕರು ಇಲ್ಲದೇ ಹೋದರೆ ಯಾವುದೇ ಕೆಲಸಗಳು ನಡೆಯದ ಸಂದರ್ಭದಲ್ಲಿ ಬಿಜೆಪಿ ಸರಕಾರಗಳು ಬಡವರ ಕಾರ್ಮಿಕರ ಪರವಾಗಿ ನಿಲ್ಲದೇ ಬಂಡವಾಳಶಾಹಿಗಳ ಭೂಮಾಲೀಕರ ಪರವಾದ ನೀತಿಗಳನ್ನು ತಂದಿದ್ದಾರೆ. ಕಾರ್ಮಿಕರ ಹಕ್ಕುಗಳನ್ನು ನಾಶ ಮಾಡಲು ಹೊರಟಿದ್ದಾರೆ ಈ ಚುನಾವಣೆ ಕಾರ್ಮಿಕರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಚ್ಚತ್ತುಕೊಂಡು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು‌

ಈ ಸಂದರ್ಭದಲ್ಲಿ ಇಂಟಕ್ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ಪ್ರಸ್ತಾವಿಕವಾಗಿ ಮಾತನಾಡಿ, ದೇಶದ ಭವಿಷ್ಯವಾದ ಕಾರ್ಮಿಕರ ಹಣವನ್ನು ದುರ್ಬಳಕೆ ಮಾಡಿಕೊಂಡ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ಕಾರ್ಮಿಕರ ಗುರಿಯಾಗಬೇಕು ಹಿಂದೆ ರಾಜ್ಯದಲ್ಲಿ ಇದ್ದ ಬಿಜೆಪಿ ಸರಕಾರ ಮತ್ತು ಕೇಂದ್ರದಲ್ಲಿನ ಮೋದಿ ಸರ್ಕಾರವು ಕಟ್ಟಡ ಕಾರ್ಮಿಕ ಕಾಯ್ದೆಗಳನ್ನು ರದ್ದುಮಾಡಲು ಹೊರಟಿದೆ. ಇದರ ವಿರುದ್ಧ ಕಾರ್ಮಿಕರು ಎಚ್ಚೆತ್ತುಕೊಂಡಿದ್ದು, ಈ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿ ಎಂದರು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಲೇಬರ್ ಸೆಲ್ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಎಐಟಿಯುಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಸೆಂಟ್ಟ್ರಿಗ್ ಕಟ್ಟಡ ಕಾರ್ಮಿಕ ಸಂಘದ ನವೀನ್ ಬಾಲು, ನ್ಯೂ ಕೋಲಾರ ಕಟ್ಟಡ ಕಾರ್ಮಿಕರ ಸಂಘದ ಶಿವಕುಮಾರ್ ರೆಡ್ಡಿ, ಕಟ್ಟಡ ಕಾರ್ಮಿಕ ಸಂಘಟನೆಯ ಮುಖಂಡರಾದ ನಾಗರಾಜ್, ಚಲಪತಿ, ವೆಂಕಟೇಶ್, ಲಕ್ಷ್ಮೀಕಾಂತಮ್ಮ, ಶಿವಣ್ಣ, ಲಕ್ಷ್ಮಿದೇವಿ, ಗೀತಾ ಮುಂತಾದವರು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

7 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago