ಕಾಂಗ್ರೆಸ್ ಮುಖಂಡರ ಆರೋಪಕ್ಕೆ ಶಾಸಕ ಧೀರಜ್ ಮುನಿರಾಜ್ ತಿರುಗೇಟು: ತಾಲೂಕಿನ ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿಲ್ಲ: ಹಂತ ಹಂತವಾಗಿ ನಗರ ಸಭೆಯ ಅನುದಾನ ಹಂಚಿಕೆ ಮಾಡುವೆ- ನಾನು ಯಾವುದೇ ತಾರತಮ್ಯ ಮಾಡಿಲ್ಲ- ಶಾಸಕ ಧೀರಜ್ ಮುನಿರಾಜು ಸ್ಪಷ್ಟನೆ

ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ನಗರ ಸಭೆಯ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಎಸಗಿಲ್ಲ. ಬಿಡುಡೆಯಾಗಿರುವ ಅಲ್ಪಸಂಖ್ಯಾತರ ಮೂರು ಕೋಟಿ ಅನುದಾನದಲ್ಲಿ ವಾರ್ಡ್ ವಾರು ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುವುದು. ಎಂದು  ಕಾಂಗ್ರೆಸ್ ನಾಯಕರ ಆರೋಪಕ್ಕೆ ಶಾಸಕ ಧೀರಜ್ ಮುನಿರಾಜು ತಿರುಗೇಟು ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ವಿಷ ಬೀಜ ಬಿತ್ತುವ ರಾಜಕಾರಣ ಮಾಡುತ್ತಿಲ್ಲ. ನನ್ನ ಬಗ್ಗೆ ಆರೋಪ ಮಾಡಿರುವ ನಗರ ಸಭೆ ಸದಸ್ಯ  ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಪಕ್ಷ ಎಲ್ಲರಿಗೂ ತಾಯಿಯಿದ್ದಂತೆ. ಆದರೆ, ನಮ್ಮ ಪಕ್ಷದ ಚಿಹ್ನೆ ಅಡಿಯಲ್ಲಿ ನಗರ ಸಭೆಗೆ ಆಯ್ಕೆಯಾಗಿ ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆ ಪತ್ರಿಕಾಗೋಷ್ಠಿ ನಡೆಸುವುದು ಎಷ್ಟು ಸರಿ. ಒಂದು ವೇಳೆ ಬಿಜೆಪಿಯಲ್ಲಿ ಇರುವುದಕ್ಕೆ ಆಗದಿದ್ದರೆ, ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಗೆದ್ದು ಪಕ್ಷ ನಿಷ್ಠೆ ಬಗ್ಗೆ ಮಾತನಾಬೇಕು ಎಂದು ನಗರಸಭಾ ಸದಸ್ಯ ಶಿವಶಂಕರ್ ಅವರಿಗೆ ತಿರುಗೇಟು ನೀಡಿದರು.

ನಾವು ಕಟ್ಟಿ ಬೆಳೆಸಿದ ಮನೆ(ಪಕ್ಷ)ಗೆ ಧೀರಜ್ ಸೇರಿಕೊಂಡಿದ್ದಾರೆ ಎಂಬ ಶಿವಶಂಕರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾರು ಮನೆ ಕಟ್ಟುವುದು? ಎಲ್.ಕೆ ಅಡ್ವಾನಿ ಕಟ್ಟಿದ ಪಕ್ಷದಲ್ಲೇ ಮೋದಿ  ಪ್ರಧಾನಿಯಾಗಿದ್ದು. ನರೇಂದ್ರ ಮೋದಿ ಕಟ್ಟಿದ ಪಕ್ಷದಲ್ಲೇ ನಾನು ನಾಯಕನಾಗಿದ್ದೇನೆ. ಯಡಿಯೂರಪ್ಪ ಕಟ್ಟಿದ ಪಕ್ಷದಲ್ಲೇ ಬಸವರಾಜ ಬೊಮ್ಮಾಯಿ, ಸದಾನಂದ ಗೌಡ ಮುಖ್ಯಮಂತ್ರಿಗಳಾಗಿದ್ದರು. ಅದೇ ಪಕ್ಷಕ್ಕೆ ಪ್ರಸ್ತುತ  ವಿಜೇಂದ್ರಣ್ಣ ಅವರು ರಾಜ್ಯಧ್ಯಕ್ಷರಾಗಿದ್ದಾರೆ. ನನ್ನ ಬಗ್ಗೆ ಮಾತನಾಡುವಾಗಿದ್ದರೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿ ಮಾತನಾಡಿಲಿ ಆಗ ನಾನು ಅವರ ಮಾತಿಗೆ ಉತ್ತರಿಸುವೆ ಎಂದು ಕಿಡಿಕಾರಿದರು.

ಯಾವುದೇ ಅಭಿವೃದ್ಧಿ ಕೆಲಸ ಮಾಡುವ ಮುಂಚೆ ಸೂಕ್ತವಾದ ಯೋಜನೆ ರೂಪಿಸಬೇಕಾಗುತ್ತದೆ. ತದನಂತರ ಕಾಮಗಾರಿಗಳನ್ನು ನಡೆಸಬೇಕಾಗುತ್ತದೆ. ಒಂದೇ ವರ್ಷದಲ್ಲಿ ಎಲ್ಲವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. 5 ವರ್ಷದಲ್ಲಿ ತಾಲ್ಲೂಕಿನ ಅಭಿವೃದ್ಧಿ ಮಾಡುತ್ತೇನೆ ಎಂದರು.

ದೊಡ್ಡಬಳ್ಳಾಪುರದಲ್ಲಿ ನಾನು ಗೆದ್ದ 10 ತಿಂಗಳೊಳಗೆ 262 ಕೋಟಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ. ಇದರಲ್ಲಿ ನಾನು ಯಾವುದೇ ರಾಜಕೀಯ ಮಾಡಿಲ್ಲ. ಹೊಸಕೋಟೆ, ನೆಲಮಂಗಲ, ದೇವನಹಳ್ಳಿಯಲ್ಲಿ ಗ್ಯಾರಂಟಿಗಳ ಸಮಾವೇಶ ಮಾಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಏಕೆ ಮಾಡಿಲ್ಲ. ಈ ಬಗ್ಗೆ ಯಾವ ಕಾಂಗ್ರೆಸ್ ನಾಯಕರು ಮಾತನಾಡಿಲ್ಲ. ನಾಡಿನ ಮುಖ್ಯಮಂತ್ರಿಗಳಿಗೆ ಗೌರವ ಕೊಡಬೇಕೆಂದು ನಾವು ಯಾವುದೇ ಪ್ರಶ್ನೆ ಮಾಡಿಲ್ಲ. ಪ್ರತೀ ಶಂಕುಸ್ಥಾಪನೆ ಕಲ್ಲಲ್ಲೂ  ಅಧ್ಯಕ್ಷತೆ ನನ್ನ ಹೆಸರಿದೆ. 36 ಕಾಮಗಾರಿಗಳು ಮತ್ತು 49 ಕಾಮಗಾರಿಗಳ ಉದ್ಘಾಟನೆ ಆಗಿದೆ. ಈ ಶಂಕುಸ್ಥಾಪನೆಯ ಕಲ್ಲುಗಳು ಕಾಣಿಸದಿದ್ದರೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ನಿನ್ನೆ ನಗರ ಹಾಗೂ ಕಸಬ ವ್ಯಾಪ್ತಿಯ ಕುಂದುಕೊರತೆ ಸಭೆ ಮಾಡಿದ್ದೇವೆ. ನಮಗೆ ಗೊತ್ತಿರುವಂತ ತಿಳುವಳಿಕೆಯಿಂದ ಎಷ್ಟು ಸಾಧ್ಯವೋ ಅಷ್ಷು ಅಭಿವೃದ್ಧಿ ಮಾಡುತ್ತಿದ್ದೇನೆ. ಅಭಿವೃದ್ಧಿ ವಿಚಾರವಾಗಿ ಸರ್ಕಾರದ ಸಂಪೂರ್ಣ ಸಹಕಾರವನ್ನು ಬೇಡುತ್ತಾ ಇದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ಬಂದರೆ ಅವರಿಗೂ ಕೊಡುತ್ತೇನೆ. ಮುಂದಿನ ವರ್ಷದಲ್ಲಿ 3 ಕೋಟಿ ಅನುದಾನ ಬಂದರೆ ಅವರಿಗೂ ಕೊಡುತ್ತೇವೆ. 3 ಕೋಟಿಯಲ್ಲಿ ಎಲ್ಲರೂ ಹಂಚಿಕೊಂಡರೆ ಯಾವುದೇ ಕಾಮಗಾರಿ ಪೂರ್ಣವಾಗಲ್ಲ ಎಂದರು.

ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಶಿಷ್ಟಾಚಾರ ಪಾಲನೆ ಮಾಡಿಲ್ಲ ಎಂಬ ಕಾಂಗ್ರೆಸ್ ಸದಸ್ಯರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಶಿಷ್ಟಚಾರ ಬಿಟ್ಟು ಎಲ್ಲೂ ಹೋಗಿಲ್ಲ. ಶಿಷ್ಟಾಚಾರ ಪ್ರಕಾರ ಕರೆಯುವುದು ಅಧಿಕಾರಿಗಳ ಕೆಲಸ. ಕಾಂಗ್ರೆಸ್ ಸದಸ್ಯರ ವಾರ್ಡ್ ಗಳ ಸಮಸ್ಯೆಗಳನ್ನು ಆಲಿಸಿ ಅಷ್ಟು ಸಮಸ್ಯೆಗಳಿಗೆ ಸ್ಪಂಧಿಸುವ ಕೆಲಸ ಮಾಡುತ್ತೇನೆ. ನಾನು ಮುಕ್ತವಾಗಿದ್ದೇನೆ, ನಾನೇ ಖುದ್ದಾಗಿ ಅವರ ಸಮಸ್ಯೆಗಳನ್ನು ಕೇಳಿ ಪಡೆದು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

7 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

19 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

20 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

21 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

21 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago