ಕಾಂಗ್ರೆಸ್ ವೋಟ್ ಚೋರಿ ಮಾಡಿ ಸೋತಿದೆ. ಮೋದಿ ದಿಲ್ ಚೋರಿ ಮಾಡಿ ಗೆದ್ದಿದ್ದಾರೆ- ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಸರ್ಕಾರವು 2026ನೇ ಸಾಲಿನ ಬಜೆಟ್‌ನಲ್ಲಿ ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದೆ. ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸಲು ಹಲವು ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. ಬಯೋಫಾರ್ಮಾ ಶಕ್ತಿ ಹಾಗೂ ಮಹಿಳೆಯರಿಗೆ ಶಿ – ಮಾರ್ಟ್ ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಈ ಬಾರಿ ಘೋಷಣೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಇಂದು ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನ ಉದ್ದೇಶಿ ಮಾತನಾಡಿದ ಅವರು, 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ಈ ಬಾರಿಯ ಬಜೆಟ್ ಯಾರನ್ನು ಓಲೈಕೆ ಮಾಡಿಲ್ಲ. ಎಲ್ಲಾ ವರ್ಗದವರ, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ.. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ, ಓಲೈಕೆ ಕಾಣಬಹುದಾಗಿತ್ತು. ಯಾವ ಬೆಲೆ, ತೆರಿಗೆ ಹೆಚ್ಚು, ಕಡಿಮೆ ಮಾಡಿಲ್ಲ. ಜನರಿಗೆ ಸೌಕರ್ಯ ನೀಡಲು ಒತ್ತು ನೀಡಿದ್ದಾರೆ. ಕ್ರೆಡಿಬಲ್, ಕಮಿಟ್ ಮೆಂಟ್ ಹೊಂದಿದ್ದೇವೆ. ನುಡಿದಂತೆ ನಡೆದಂತೆ ಬಜೆಟ್ ಮಂಡಸಲಾಗಿದೆ ಎಂದರು.

ರಾಷ್ಟ್ರೀಯ ನಾರು ಯೋಜನೆ, ಜವಳಿ ವಿಸ್ತರಣೆ ಮತ್ತು ಉದ್ಯೋಗ ಯೋಜನೆ ಮತ್ತು ಕೌಶಲ್ಯಕ್ಕಾಗಿ ಸಮರ್ಥ್ 2.0 ಸೇರಿದಂತೆ ಸಮಗ್ರ ಯೋಜನೆಯನ್ನು ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.

ಜಾಗತಿಕ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳ ಮೂಲಕ ಖಾದಿ, ಕೈಮಗ್ಗ ಮತ್ತು ಕರಕುಶಲ ವಸ್ತುಗಳನ್ನು ಬಲಪಡಿಸಲು ಹೊಸ ಉಪಕ್ರಮವನ್ನು ಕೇಂದ್ರ ಸರ್ಕಾರವು 2026ನೇ ಸಾಲಿನ ಬಜೆಟ್‌ನಲ್ಲಿ ಅಳವಡಿಸಿಕೊಂಡಿದೆ ಎಂದರು.

ಎಂಎಸ್‌ಎಂಇ ವಲಯದ ಬೆಳವಣಿಗೆಗೆ ಇದು ಪೂರಕವಾದ ಬಜೆಟ್ ಆಗಿದೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಪ್ರಗತಿಗಾಗಿ 3 ಪ್ರಸ್ತಾವನೆಗಳನ್ನು ಪರಿಚಯಿಸಲಾಗಿದೆ. ಅದರಂತೆ ಮೊದಲ ಪ್ರಸ್ತಾವನೆ ಎಂಎಸ್‌ಎಂಇಗಳನ್ನು ಭವಿಷ್ಯದ “ಚಾಂಪಿಯನ್’ಗಳನ್ನಾಗಿ ಮಾಡಲು 10,000 ಕೋಟಿ ರೂ.ಗಳ ನಿಧಿ ಸ್ಥಾಪಿಸುವುದಾಗಿ ಘೋಷಿಸಲಾಗಿದೆ ಎಂದು ತಿಳಿಸಿದರು.

ಈ ಉದ್ಯಮಗಳು ಹೆಚ್ಚು ಸ್ವಾಲಂಬಿಯಾಗಬೇಕೆನ್ನುವ ಉದ್ದೇಶದಿಂದ “ಆತ್ಮನಿರ್ಭರ ಭಾರತ ನಿಧಿ’ಯಡಿ ಹೆಚ್ಚುವರಿಯಾಗಿ 2,000 ಕೋಟಿ ರೂ. ನೀಡುವುದಾಗಿಯೂ ತಿಳಿಸಲಾಗಿದೆ. ಜತೆಗೆ ಸೂಕ್ಷ್ಮ ಉದ್ಯಮಗಳಿಗೆ ಬೆಂಬಲವನ್ನು ಮುಂದು ವರಿಸಲು ಮತ್ತು ಸೂಕ್ಷ್ಮ ಉದ್ಯಮದಲ್ಲಿ ಅಪಾಯದ ಬಂಡವಾಳ ಹೂಡಿಕೆ ತಪ್ಪಿಸಲೂ ಈ ಆತ್ಮನಿರ್ಭರ ಭಾರತ ನಿಧಿಯು ಸಹಾಯ ಮಾಡಲಿದೆ ಎಂದು ಹೇಳಿದರು.

ನಮ್ಮ ದೇಶದ ಬೆಳವಣಿಗೆ ವೇಗ ಹೆಚ್ಚಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ಉತ್ತಮ ಆಡಳಿತ ನೀಡುತ್ತಿದ್ದಾರೆ. ನಾಗರಿಕರು ಕೊಳ್ಳುವ ಶಕ್ತಿ ಹೆಚ್ಚಿಸಲು ಅನುಕೂಲಕರ ಬಜೆಟ್ ಆಗಿದೆ. ತೆಂಗು, ಗೋಡಂಬಿ, ಶ್ರೀಗಂಧ ಬೆಳೆಯುವವರಿಗೆ, ಮೀನುಗಾರರಿಕೆಗೆ ಒತ್ತು ನೀಡಲಾಗಿದೆ. ಮಧ್ಯಮವರ್ಗದ ಅಭಿವೃದ್ಧಿ ಆದ್ಯತೆ ನೀಡಲಾಗಿದೆ. ಸಬ್ಸಿಡಿ ಹೆಚ್ಚಿದಂತೆ ಅಭಿವೃದ್ಧಿ ವೇಗ ಕಡಿಮೆ ಆಗುತ್ತದೆ. ಕೌಶಲ್ಯ ಇಲ್ಲದಿದ್ದರೆ ಉದ್ಯೋಗ ಸಿಗುತ್ತಿಲ್ಲ. ಇದರಿಂದ ಎಂಎಸ್ಎಂಇ ಅಭಿವೃದ್ಧಿ ಮೂಲಕ ಕೌಶಲಕ್ಕೆ ಒತ್ತು ನೀಡಲಾಗಿದೆ. ಎಂಎಸ್ ಎಂಇ ಮೂಲಕ ಅನೇಕರಿಗೆ ಉದ್ಯೋಗ ನೀಡುವ ಭರವಸೆ ನೀಡಲಾಗಿದೆ ಎಂದರು.

ಕಾಂಗ್ರೆಸ್ ಆಡಳಿತದಲ್ಲಿ ಕರ್ಪೋರೇಷನ್ (ನಿಪುಣರು) ಓಲೈಕೆ, ಭ್ರಷ್ಟಾಚಾರ, ಕಮಿಷನ್ ದಂಧೆ (ಟೆಂಡರ್), ಕ್ರಿಮಿನಲ್, ಜಾತಿ ರಾಜಕಾರಣ ಮಾಡಲಾಗುತ್ತಿದೆ. ಮುಸ್ಲಿಂ ಅವರಿಗೆ ಮಾತ್ರ ಸಾಲದ ಮೇಲೆ ಬಡ್ಡಿ ವಜಾ ಮಾಡಲಾಗಿದೆ, ಕಾಂಗ್ರೆಸ್ ಸರ್ಕಾರ ಮುಸ್ಲಿಂಗಾಗಿ ಹುಟ್ಟಿದೆ ಅನಿಸುತ್ತೆ. ನಾವು ಅಲ್ಪಸಂಖ್ಯಾತರ ವಿರೋಧಿಗಳ ಅಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕು ಎಂಬುದು ಬಿಜೆಪಿ ತತ್ವ ಎಂದರು.

ಹೊಸ ಆದಾಯ ತೆರಿಗೆ ಕಾಯ್ದೆಯು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದೆ. 1961 ರ ಕಾಯಿದೆಯನ್ನು ಸರಳೀಕೃತ ನಿಯಮಗಳು ಮತ್ತು ಕಡಿಮೆ ವಿಭಾಗಗಳೊಂದಿಗೆ ಬದಲಾಯಿಸಲಾಗಿದೆ ಎಂದು ಹೇಳಿದರು.

ಮಧ್ಯಮ ವರ್ಗದವರ ಆರ್ಥಿಕ‌ ಸಬಲತೆಗೆ ಹೆಚ್ಚು ಒತ್ತು ನೀಡಲಾಗಿದೆ. ಎಂ ಎಸ್ ಎಂ ಇ‌ ಬಂದಮೇಲೆ ಎಲ್ಲರು ಸ್ವತಂತ್ರರಾಗುತ್ತಿದ್ದಾರೆ. ಟೆಕ್ಸ್ ಟೈಲ್ ಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ಪಾನ‌ಮತ್ತರಿಗೆ ಕಾಂಗ್ರೆಸ್ ನಲ್ಲಿ ಅವಕಾಶವಿಲ್ಲವೆನ್ನುತ್ತಾರೆ. ಆದರೆ ಆ ಪಕ್ಷದಲ್ಲೇ ಪಾನಪ್ರಿಯರಿದ್ದಾರೆ. ಕಾಂಗ್ರೆಸ್ ಅವರಿಗೆ ಕುಡಿದಿಲ್ಲ ಎಂದರೆ ರಾತ್ರಿ ನಿದ್ದೆ ಬರಲ್ಲ. ಒಂದು ದಿನನೂ ರಾಹುಲ್ ಗಾಂಧಿ ಖಾದಿ ಹಾಕಿಲ್ಲ. ಗಾಂಧಿ ತತ್ವಗಳ ವಿರುದ್ಧ ಕಾಂಗ್ರೆಸ್ ಇದೆ. ಕಾಂಗ್ರೆಸ್ ನಲ್ಲಿ ಸ್ಕೀಮ್ ಗಳು ಇಲ್ಲ ಬರೀ ಸ್ಕ್ಯಾಮ್ ಮಾಡುತ್ತಿದ್ದರು. ಮಹಾತ್ಮಗಾಂಧಿ ಹೆಸರಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ. ಹಿಂದುಗಳನ್ನ, ರಾಮನನ್ನ ಕಂಡರೆ ಕಾಂಗ್ರೆಸ್ ಗೆ ಆಗಲ್ಲ. ಯೋಜನೆಗಳಿಗೆ ಮುಸ್ಲಿಂ ಹೆಸರನ್ನ ಇಟ್ಟಿದ್ದರೆ ಬಂದು ಅಪ್ಪುಕೊಳ್ಳುತ್ತಿದ್ದರು. ಇಂದಿರಾ ಗಾಂಧಿ ಅವರ ಪತಿ ಗ್ಯಾಂಡಿ ಅಂತ ಇತ್ತು. ಗ್ಯಾಂಡಿ ಇದ್ದಿದ್ದು ಗಾಂಧಿ ಹೇಗಾಯಿತು ಎಂಬುದು ಗೊತ್ತಿಲ್ಲ. ಮುಸ್ಲಿಂರ ನಿಷ್ಠೆ ಯಾರ ಪರವೂ ಇರಲ್ಲ. ಅವರದ್ದು ಅವರ ಧರ್ಮದ ಬಗ್ಗೆ ಮಾತ್ರ ಲಾಯಲ್ ಟಿ ಇರುತ್ತದೆ. 2047ಕ್ಕೆ ಆರ್ಥಿಕ ವ್ಯವಸ್ಥೆಯಲ್ಲಿ ಸದೃಢವಾಗಬೇಕು. ದಿಲ್ ಚೋರಿ ಆಗಬೇಕೇ ಹೊರೆತು ವೋಟ್ ಆಗಬಾರದು. ಕಾಂಗ್ರೆಸ್ ವೋಟ್ ಚೋರಿ ಮಾಡಿ ಸೋತಿದೆ. ಮೋದಿ ದಿಲ್ ಚೋರಿ ಮಾಡಿ ಗೆದ್ದಿದ್ದಾರೆ ಎಂದರು.

ಶಾಸಕ ಧೀರಜ್ ಮುನಿರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ, ಹಿರಿಯ ಮುಖಂಡರಾದ ಕೆ.ಎಚ್ ಹನುಮಂತರಾಯಪ್ಪ, ಗೋಪಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ವೆಂಕಟೇಶ್, ನಗರಾಧ್ಯಕ್ಷ ಮುದ್ದಪ್ಪ, ಮಂಜುನಾಥ ಇದ್ದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

60 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

18 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago